ಬ್ರೇಕಿಂಗ್ ನ್ಯೂಸ್
08-08-24 07:16 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ಎಡಕುಮೇರಿ- ಕಡಗರವಳ್ಳಿ ನಡುವೆ ಭೂಕುಸಿತದಿಂದ ಮಂಗಳೂರು- ಬೆಂಗಳೂರು ನಡುವೆ ರೈಲು ಸಂಚಾರಕ್ಕೆ ತೊಡಕಾಗಿತ್ತು. ಎರಡು ವಾರಗಳ ಸತತ ಪ್ರಯತ್ನದ ಬಳಿಕ ಭೂಕುಸಿತ ಪ್ರದೇಶದಲ್ಲಿ ರೈಲು ಹಳಿಯನ್ನು ಸರಿಪಡಿಸಲಾಗಿದ್ದು, ಆಗಸ್ಟ್ 8ರಿಂದ ಎಂದಿನಂತೆ ರೈಲುಗಳ ಸಂಚಾರಕ್ಕೆ ತೆರೆದುಕೊಂಡಿದೆ. ಅತ್ತ ಶಿರಾಡಿ ಹೆದ್ದಾರಿ ಓಪನ್ ಆದ ಬೆನ್ನಲ್ಲೇ ರೈಲು ಸಂಚಾರವೂ ಆರಂಭಗೊಂಡಂತಾಗಿದ್ದು, ಬಸ್ಸುಗಳ ಮಿತಿಮೀರಿದ ದರದಿಂದಾಗಿ ದಣಿದಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಸುಬ್ರಹ್ಮಣ್ಯ – ಸಕಲೇಶಪುರದ ರೈಲು ಹಳಿಯಲ್ಲಿ ಭೂಕುಸಿತ ಉಂಟಾಗಿದ್ದರಿಂದ ಜುಲೈ 26ರ ಬಳಿಕ ಈ ಹಾದಿಯಲ್ಲಿ ರೈಲು ಸಂಚಾರವನ್ನು ನಿಲ್ಲಿಸಲಾಗಿತ್ತು. ದಕ್ಷಿಣ ರೈಲ್ವೇ ಮತ್ತು ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳ ಜಂಟಿ ಪ್ರಯತ್ನ, ದಿನದಲ್ಲಿ 200ಕ್ಕೂ ಹೆಚ್ಚು ಸಿಬಂದಿಗಳ ಕಾರ್ಯಾಚರಣೆಯ ಬಳಿಕ ಗುಡ್ಡ ಕುಸಿತ ಆಗಿರುವಲ್ಲಿ ತಡೆಗೋಡೆ ನಿರ್ಮಿಸಲಾಗಿದೆ. ಅಲ್ಲದೆ, ಹಳಿಯ ಬದಿಗೆ ಹೆಚ್ಚುವರಿಯಾಗಿ ಕಾಂಕ್ರೀಟ್ ಸ್ಲಾಬ್ ಗಳನ್ನು ಜೋಡಿಸಲಾಗಿದೆ. ಆಗಸ್ಟ್ 4ರಂದು ಬಹುತೇಕ ಕೆಲಸ ಮುಗಿದಿದ್ದು, ಗೂಡ್ಸ್ ರೈಲು ಸಾಗುವುದಕ್ಕೆ ರೈಲ್ವೇ ಅಧಿಕಾರಿಗಳು ಹಸಿರು ನಿಶಾನೆ ನೀಡಿದ್ದರು. ಆನಂತರ, ಭಾರದ ಎಂಜಿನಗಳನ್ನು ಆ ದಾರಿಯಲ್ಲಿ ಸಾಗಿಸಲಾಗಿತ್ತು.



ಆಗಸ್ಟ್ 6ರಂದು ಫುಲ್ ಲೋಡ್ ಆಗಿದ್ದ ಗೂಡ್ಸ್ ರೈಲೊಂದನ್ನು ಇದೇ ಹಾದಿಯಲ್ಲಿ ಸಾಗಿಸಲಾಗಿದ್ದು, ಮಳೆಯ ನಡುವೆಯೂ ಯಶಸ್ವಿಯಾಗಿ ಹಳಿಯಲ್ಲಿ ಸಾಗಿ ಹೋಗಿದೆ. ಮುಂಜಾಗ್ರತಾ ಕ್ರಮವಾಗಿ ರೈಲಿನ ವೇಗವನ್ನು ಗಂಟೆಗೆ 15 ಕಿಮೀಗೆ ಇಳಿಸಲಾಗಿತ್ತು. ಆಗಸ್ಟ್ 8ರ ಗುರುವಾರ ಮಧ್ಯಾಹ್ನ ಯಶವಂತಪುರ- ಮಂಗಳೂರು ಜಂಕ್ಷನ್ ರೈಲು ಸಕಲೇಶಪುರ ಹಳಿಯ ಮೂಲಕ ಸಾಗಿದ್ದು, ಪ್ಯಾಸೆಂಜರ್ ರೈಲು ಸಾಗುವುದಕ್ಕೆ ಅಧಿಕಾರಿಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಂದಿನಿಂದ ಎಲ್ಲ ನಿಗದಿತ ರೈಲುಗಳು ಎಂದಿನಂತೆ ಮಂಗಳೂರು – ಬೆಂಗಳೂರು ಮಧ್ಯೆ ಸಂಚಾರ ಆರಂಭಿಸಲಿದೆ ಎಂದು ಸೌತ್ ವೆಸ್ಟರ್ನ್ ರೈಲ್ವೇಯ ಚೀಫ್ ಪಬ್ಲಿಕ್ ರಿಲೇಶನ್ ಆಫೀಸರ್ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.
The South Western Railway (SWR) on Thursday (August 8, 2024), resumed passenger train services on the Bengaluru-Mangaluru sector by safely passing Train No. 16575 Yeshwantpur-Mangaluru Junction Gomateshwara tri-weekly Express, after restoring the landslip-affected stretch on Sakelshpur-Subrahmanya Road Ghat section.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm