ಬ್ರೇಕಿಂಗ್ ನ್ಯೂಸ್
08-08-24 07:16 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ಎಡಕುಮೇರಿ- ಕಡಗರವಳ್ಳಿ ನಡುವೆ ಭೂಕುಸಿತದಿಂದ ಮಂಗಳೂರು- ಬೆಂಗಳೂರು ನಡುವೆ ರೈಲು ಸಂಚಾರಕ್ಕೆ ತೊಡಕಾಗಿತ್ತು. ಎರಡು ವಾರಗಳ ಸತತ ಪ್ರಯತ್ನದ ಬಳಿಕ ಭೂಕುಸಿತ ಪ್ರದೇಶದಲ್ಲಿ ರೈಲು ಹಳಿಯನ್ನು ಸರಿಪಡಿಸಲಾಗಿದ್ದು, ಆಗಸ್ಟ್ 8ರಿಂದ ಎಂದಿನಂತೆ ರೈಲುಗಳ ಸಂಚಾರಕ್ಕೆ ತೆರೆದುಕೊಂಡಿದೆ. ಅತ್ತ ಶಿರಾಡಿ ಹೆದ್ದಾರಿ ಓಪನ್ ಆದ ಬೆನ್ನಲ್ಲೇ ರೈಲು ಸಂಚಾರವೂ ಆರಂಭಗೊಂಡಂತಾಗಿದ್ದು, ಬಸ್ಸುಗಳ ಮಿತಿಮೀರಿದ ದರದಿಂದಾಗಿ ದಣಿದಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಸುಬ್ರಹ್ಮಣ್ಯ – ಸಕಲೇಶಪುರದ ರೈಲು ಹಳಿಯಲ್ಲಿ ಭೂಕುಸಿತ ಉಂಟಾಗಿದ್ದರಿಂದ ಜುಲೈ 26ರ ಬಳಿಕ ಈ ಹಾದಿಯಲ್ಲಿ ರೈಲು ಸಂಚಾರವನ್ನು ನಿಲ್ಲಿಸಲಾಗಿತ್ತು. ದಕ್ಷಿಣ ರೈಲ್ವೇ ಮತ್ತು ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳ ಜಂಟಿ ಪ್ರಯತ್ನ, ದಿನದಲ್ಲಿ 200ಕ್ಕೂ ಹೆಚ್ಚು ಸಿಬಂದಿಗಳ ಕಾರ್ಯಾಚರಣೆಯ ಬಳಿಕ ಗುಡ್ಡ ಕುಸಿತ ಆಗಿರುವಲ್ಲಿ ತಡೆಗೋಡೆ ನಿರ್ಮಿಸಲಾಗಿದೆ. ಅಲ್ಲದೆ, ಹಳಿಯ ಬದಿಗೆ ಹೆಚ್ಚುವರಿಯಾಗಿ ಕಾಂಕ್ರೀಟ್ ಸ್ಲಾಬ್ ಗಳನ್ನು ಜೋಡಿಸಲಾಗಿದೆ. ಆಗಸ್ಟ್ 4ರಂದು ಬಹುತೇಕ ಕೆಲಸ ಮುಗಿದಿದ್ದು, ಗೂಡ್ಸ್ ರೈಲು ಸಾಗುವುದಕ್ಕೆ ರೈಲ್ವೇ ಅಧಿಕಾರಿಗಳು ಹಸಿರು ನಿಶಾನೆ ನೀಡಿದ್ದರು. ಆನಂತರ, ಭಾರದ ಎಂಜಿನಗಳನ್ನು ಆ ದಾರಿಯಲ್ಲಿ ಸಾಗಿಸಲಾಗಿತ್ತು.



ಆಗಸ್ಟ್ 6ರಂದು ಫುಲ್ ಲೋಡ್ ಆಗಿದ್ದ ಗೂಡ್ಸ್ ರೈಲೊಂದನ್ನು ಇದೇ ಹಾದಿಯಲ್ಲಿ ಸಾಗಿಸಲಾಗಿದ್ದು, ಮಳೆಯ ನಡುವೆಯೂ ಯಶಸ್ವಿಯಾಗಿ ಹಳಿಯಲ್ಲಿ ಸಾಗಿ ಹೋಗಿದೆ. ಮುಂಜಾಗ್ರತಾ ಕ್ರಮವಾಗಿ ರೈಲಿನ ವೇಗವನ್ನು ಗಂಟೆಗೆ 15 ಕಿಮೀಗೆ ಇಳಿಸಲಾಗಿತ್ತು. ಆಗಸ್ಟ್ 8ರ ಗುರುವಾರ ಮಧ್ಯಾಹ್ನ ಯಶವಂತಪುರ- ಮಂಗಳೂರು ಜಂಕ್ಷನ್ ರೈಲು ಸಕಲೇಶಪುರ ಹಳಿಯ ಮೂಲಕ ಸಾಗಿದ್ದು, ಪ್ಯಾಸೆಂಜರ್ ರೈಲು ಸಾಗುವುದಕ್ಕೆ ಅಧಿಕಾರಿಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಂದಿನಿಂದ ಎಲ್ಲ ನಿಗದಿತ ರೈಲುಗಳು ಎಂದಿನಂತೆ ಮಂಗಳೂರು – ಬೆಂಗಳೂರು ಮಧ್ಯೆ ಸಂಚಾರ ಆರಂಭಿಸಲಿದೆ ಎಂದು ಸೌತ್ ವೆಸ್ಟರ್ನ್ ರೈಲ್ವೇಯ ಚೀಫ್ ಪಬ್ಲಿಕ್ ರಿಲೇಶನ್ ಆಫೀಸರ್ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.
The South Western Railway (SWR) on Thursday (August 8, 2024), resumed passenger train services on the Bengaluru-Mangaluru sector by safely passing Train No. 16575 Yeshwantpur-Mangaluru Junction Gomateshwara tri-weekly Express, after restoring the landslip-affected stretch on Sakelshpur-Subrahmanya Road Ghat section.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm