ಬ್ರೇಕಿಂಗ್ ನ್ಯೂಸ್
09-08-24 07:29 pm Udupi Correspondent ಕರಾವಳಿ
ಉಡುಪಿ, ಆ.07: ಉಡುಪಿಯ ನಗರಸಭೆ ಸಮೀಪದ ರಸ್ತೆಯಲ್ಲಿ ಹಾಡಹಗಲಲ್ಲೇ ಜೋಡಿಯೊಂದು ಕಾರಿನೊಳಗೆ ರತಿಕ್ರೀಡೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಹೌದು.. ನಿಂತಲ್ಲೇ ನಿಂತುಕೊಂಡಿದ್ದ ಕಾರು ಏಕಾಏಕಿ ಅಲ್ಲಾಡಲು ಶುರು ಮಾಡಿದೆ. ಇದನ್ನು ಸ್ಥಳೀಯರು ಕೆಲ ಸಮಯ ಗಾಬರಿಯಿಂದ ನೋಡುತ್ತ ನಿಂತಿದ್ದಾರೆ. ಆದರೂ ಸಹ ಅಕ್ಕಪಕ್ಕ ಯಾರು ಇಲ್ಲದೇ ಕಾರು ತನ್ನಷ್ಟಕ್ಕೆ ತಾನೇ ಮತ್ತಷ್ಟು ಅಲುಗಾಡತ್ತಲೇ ಇತ್ತು. ಕೊನೆಗೆ ಜನರು ಕುತೂಹಲದಿಂದ ಕಾರಿನ ಹತ್ತಿರ ಹೋಗಿ ಬಾಗಿಲು ತೆಗೆದಿದ್ದಾರೆ. ಆಗ ಯುವಕ-ಯುವತಿ ಕಾರಿನೊಳಗೆ ಏಕಾಂತದಲ್ಲಿರುವುದು ಕಂಡುಬಂದಿದೆ. ಕಾರಿನ ಡೋರ್ ಗ್ಲಾಸ್ ಮರೆಮಾಚಿ ರಾಸಲೀಲೆಯಲ್ಲಿ ತೊಡಗಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಛೀಮಾರಿ ಹಾಕಿದ್ದಾರೆ.
ಅತಿ ಹೆಚ್ಚು ಜನರು ಸಂಚಾರ ಮಾಡುವ ನಗರಸಭೆಯ ಸಮೀಪದಲ್ಲಿಯೇ ಇರುವ ರಸ್ತೆಯಲ್ಲಿ ಕಾರು ಅಲ್ಲಾಡುವುದನ್ನು ನೋಡಿ ಜನರು ಕಿಟಕಿಯಿಂದ ಇಣುಕಿ ಹಾಕಿದ್ದಾರೆ. ಆದರೆ, ಕಾರಿಗೆ ಕಿಟಕಿಗಳಿಗೆ ಪರದೆಯ ರೀತಿಯಲ್ಲಿ ಬಟ್ಟೆಯನ್ನು ಹೊದಿಸಲಾಗಿತ್ತು. ಹಾಗಾಗಿ, ಹೊರಗಡೆ ಇದ್ದವರಿಗೆ ಒಳಗೆ ಏನು ನಡೆಯುತ್ತಿದೆ ಎನ್ನುವುದು ಗೊತ್ತಾಗಿಲ್ಲ. ಬಳಿಕ ಜನರು ಡೋರ್ ತೆಗೆಯಲು ಪ್ರಯತ್ನಿಸಿದ್ದಾರೆ. ಬಳಿಕ ಕಾರಿನೊಳಗಿದ್ದ ಜೋಡಿ ಬಟ್ಟೆ ಸರಿ ಮಾಡಿಕೊಂಡು ಡೋರ್ ಓಪನ್ ಮಾಡಿದೆ. ಆಗ ಸಾರ್ವಜನಿಕರಿಗೆ ಕಾರಿನೊಳಗಿದ್ದ ಯುವಕ-ಯುವತಿಯ ದರ್ಶನವಾಗಿದೆ.
ಕಾರಿನೊಳಗೆ ಕಾಮದಾಟದಲ್ಲಿ ತೊಡಗಿದ್ದ ಜೋಡಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಜನರು ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಜನರು, ಸಾರ್ವಜನಿಕರ ಸ್ಥಳದಲ್ಲಿ ಅನೈತಿಕ ಚಟುವಟಿಕೆ ನಡೆಸಿ, ಮುಜುಗರ ಉಂಟು ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ಬಳಿಕ ಜೋಡಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು. ಅತ್ತ ಜೋಡಿ ಠಾಣೆಗೆ ಹೋಗುತ್ತಿದ್ದಂತೆಯೇ ಇತ್ತ ಜನರು ಕಾರಿನಲ್ಲಿ ಏನಿದೆ ಎಂದು ಕುತೂಹಲದಿಂದ ಇಣುಕಿ ಇಣುಕಿ ನೋಡಿದ್ದಾರೆ. ಆಗ ಕಾರಿನೊಳಗೆ ಬಿಚ್ಚಿಟ್ಟಿದ್ದ ಪ್ಯಾಂಟ್ ಸಹ ಪತ್ತೆಯಾಗಿದೆ.
Udupi couple have sex inside car in broad daylight, photos go viral. Public who saw the car shaking informed the police later both were taken to the police station.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm