ಬ್ರೇಕಿಂಗ್ ನ್ಯೂಸ್
09-08-24 07:29 pm Udupi Correspondent ಕರಾವಳಿ
ಉಡುಪಿ, ಆ.07: ಉಡುಪಿಯ ನಗರಸಭೆ ಸಮೀಪದ ರಸ್ತೆಯಲ್ಲಿ ಹಾಡಹಗಲಲ್ಲೇ ಜೋಡಿಯೊಂದು ಕಾರಿನೊಳಗೆ ರತಿಕ್ರೀಡೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಹೌದು.. ನಿಂತಲ್ಲೇ ನಿಂತುಕೊಂಡಿದ್ದ ಕಾರು ಏಕಾಏಕಿ ಅಲ್ಲಾಡಲು ಶುರು ಮಾಡಿದೆ. ಇದನ್ನು ಸ್ಥಳೀಯರು ಕೆಲ ಸಮಯ ಗಾಬರಿಯಿಂದ ನೋಡುತ್ತ ನಿಂತಿದ್ದಾರೆ. ಆದರೂ ಸಹ ಅಕ್ಕಪಕ್ಕ ಯಾರು ಇಲ್ಲದೇ ಕಾರು ತನ್ನಷ್ಟಕ್ಕೆ ತಾನೇ ಮತ್ತಷ್ಟು ಅಲುಗಾಡತ್ತಲೇ ಇತ್ತು. ಕೊನೆಗೆ ಜನರು ಕುತೂಹಲದಿಂದ ಕಾರಿನ ಹತ್ತಿರ ಹೋಗಿ ಬಾಗಿಲು ತೆಗೆದಿದ್ದಾರೆ. ಆಗ ಯುವಕ-ಯುವತಿ ಕಾರಿನೊಳಗೆ ಏಕಾಂತದಲ್ಲಿರುವುದು ಕಂಡುಬಂದಿದೆ. ಕಾರಿನ ಡೋರ್ ಗ್ಲಾಸ್ ಮರೆಮಾಚಿ ರಾಸಲೀಲೆಯಲ್ಲಿ ತೊಡಗಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಛೀಮಾರಿ ಹಾಕಿದ್ದಾರೆ.
ಅತಿ ಹೆಚ್ಚು ಜನರು ಸಂಚಾರ ಮಾಡುವ ನಗರಸಭೆಯ ಸಮೀಪದಲ್ಲಿಯೇ ಇರುವ ರಸ್ತೆಯಲ್ಲಿ ಕಾರು ಅಲ್ಲಾಡುವುದನ್ನು ನೋಡಿ ಜನರು ಕಿಟಕಿಯಿಂದ ಇಣುಕಿ ಹಾಕಿದ್ದಾರೆ. ಆದರೆ, ಕಾರಿಗೆ ಕಿಟಕಿಗಳಿಗೆ ಪರದೆಯ ರೀತಿಯಲ್ಲಿ ಬಟ್ಟೆಯನ್ನು ಹೊದಿಸಲಾಗಿತ್ತು. ಹಾಗಾಗಿ, ಹೊರಗಡೆ ಇದ್ದವರಿಗೆ ಒಳಗೆ ಏನು ನಡೆಯುತ್ತಿದೆ ಎನ್ನುವುದು ಗೊತ್ತಾಗಿಲ್ಲ. ಬಳಿಕ ಜನರು ಡೋರ್ ತೆಗೆಯಲು ಪ್ರಯತ್ನಿಸಿದ್ದಾರೆ. ಬಳಿಕ ಕಾರಿನೊಳಗಿದ್ದ ಜೋಡಿ ಬಟ್ಟೆ ಸರಿ ಮಾಡಿಕೊಂಡು ಡೋರ್ ಓಪನ್ ಮಾಡಿದೆ. ಆಗ ಸಾರ್ವಜನಿಕರಿಗೆ ಕಾರಿನೊಳಗಿದ್ದ ಯುವಕ-ಯುವತಿಯ ದರ್ಶನವಾಗಿದೆ.
ಕಾರಿನೊಳಗೆ ಕಾಮದಾಟದಲ್ಲಿ ತೊಡಗಿದ್ದ ಜೋಡಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಜನರು ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಜನರು, ಸಾರ್ವಜನಿಕರ ಸ್ಥಳದಲ್ಲಿ ಅನೈತಿಕ ಚಟುವಟಿಕೆ ನಡೆಸಿ, ಮುಜುಗರ ಉಂಟು ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ಬಳಿಕ ಜೋಡಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು. ಅತ್ತ ಜೋಡಿ ಠಾಣೆಗೆ ಹೋಗುತ್ತಿದ್ದಂತೆಯೇ ಇತ್ತ ಜನರು ಕಾರಿನಲ್ಲಿ ಏನಿದೆ ಎಂದು ಕುತೂಹಲದಿಂದ ಇಣುಕಿ ಇಣುಕಿ ನೋಡಿದ್ದಾರೆ. ಆಗ ಕಾರಿನೊಳಗೆ ಬಿಚ್ಚಿಟ್ಟಿದ್ದ ಪ್ಯಾಂಟ್ ಸಹ ಪತ್ತೆಯಾಗಿದೆ.
Udupi couple have sex inside car in broad daylight, photos go viral. Public who saw the car shaking informed the police later both were taken to the police station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm