ಬ್ರೇಕಿಂಗ್ ನ್ಯೂಸ್
09-08-24 07:29 pm Udupi Correspondent ಕರಾವಳಿ
ಉಡುಪಿ, ಆ.07: ಉಡುಪಿಯ ನಗರಸಭೆ ಸಮೀಪದ ರಸ್ತೆಯಲ್ಲಿ ಹಾಡಹಗಲಲ್ಲೇ ಜೋಡಿಯೊಂದು ಕಾರಿನೊಳಗೆ ರತಿಕ್ರೀಡೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಹೌದು.. ನಿಂತಲ್ಲೇ ನಿಂತುಕೊಂಡಿದ್ದ ಕಾರು ಏಕಾಏಕಿ ಅಲ್ಲಾಡಲು ಶುರು ಮಾಡಿದೆ. ಇದನ್ನು ಸ್ಥಳೀಯರು ಕೆಲ ಸಮಯ ಗಾಬರಿಯಿಂದ ನೋಡುತ್ತ ನಿಂತಿದ್ದಾರೆ. ಆದರೂ ಸಹ ಅಕ್ಕಪಕ್ಕ ಯಾರು ಇಲ್ಲದೇ ಕಾರು ತನ್ನಷ್ಟಕ್ಕೆ ತಾನೇ ಮತ್ತಷ್ಟು ಅಲುಗಾಡತ್ತಲೇ ಇತ್ತು. ಕೊನೆಗೆ ಜನರು ಕುತೂಹಲದಿಂದ ಕಾರಿನ ಹತ್ತಿರ ಹೋಗಿ ಬಾಗಿಲು ತೆಗೆದಿದ್ದಾರೆ. ಆಗ ಯುವಕ-ಯುವತಿ ಕಾರಿನೊಳಗೆ ಏಕಾಂತದಲ್ಲಿರುವುದು ಕಂಡುಬಂದಿದೆ. ಕಾರಿನ ಡೋರ್ ಗ್ಲಾಸ್ ಮರೆಮಾಚಿ ರಾಸಲೀಲೆಯಲ್ಲಿ ತೊಡಗಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಛೀಮಾರಿ ಹಾಕಿದ್ದಾರೆ.
ಅತಿ ಹೆಚ್ಚು ಜನರು ಸಂಚಾರ ಮಾಡುವ ನಗರಸಭೆಯ ಸಮೀಪದಲ್ಲಿಯೇ ಇರುವ ರಸ್ತೆಯಲ್ಲಿ ಕಾರು ಅಲ್ಲಾಡುವುದನ್ನು ನೋಡಿ ಜನರು ಕಿಟಕಿಯಿಂದ ಇಣುಕಿ ಹಾಕಿದ್ದಾರೆ. ಆದರೆ, ಕಾರಿಗೆ ಕಿಟಕಿಗಳಿಗೆ ಪರದೆಯ ರೀತಿಯಲ್ಲಿ ಬಟ್ಟೆಯನ್ನು ಹೊದಿಸಲಾಗಿತ್ತು. ಹಾಗಾಗಿ, ಹೊರಗಡೆ ಇದ್ದವರಿಗೆ ಒಳಗೆ ಏನು ನಡೆಯುತ್ತಿದೆ ಎನ್ನುವುದು ಗೊತ್ತಾಗಿಲ್ಲ. ಬಳಿಕ ಜನರು ಡೋರ್ ತೆಗೆಯಲು ಪ್ರಯತ್ನಿಸಿದ್ದಾರೆ. ಬಳಿಕ ಕಾರಿನೊಳಗಿದ್ದ ಜೋಡಿ ಬಟ್ಟೆ ಸರಿ ಮಾಡಿಕೊಂಡು ಡೋರ್ ಓಪನ್ ಮಾಡಿದೆ. ಆಗ ಸಾರ್ವಜನಿಕರಿಗೆ ಕಾರಿನೊಳಗಿದ್ದ ಯುವಕ-ಯುವತಿಯ ದರ್ಶನವಾಗಿದೆ.
ಕಾರಿನೊಳಗೆ ಕಾಮದಾಟದಲ್ಲಿ ತೊಡಗಿದ್ದ ಜೋಡಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಜನರು ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಜನರು, ಸಾರ್ವಜನಿಕರ ಸ್ಥಳದಲ್ಲಿ ಅನೈತಿಕ ಚಟುವಟಿಕೆ ನಡೆಸಿ, ಮುಜುಗರ ಉಂಟು ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ಬಳಿಕ ಜೋಡಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು. ಅತ್ತ ಜೋಡಿ ಠಾಣೆಗೆ ಹೋಗುತ್ತಿದ್ದಂತೆಯೇ ಇತ್ತ ಜನರು ಕಾರಿನಲ್ಲಿ ಏನಿದೆ ಎಂದು ಕುತೂಹಲದಿಂದ ಇಣುಕಿ ಇಣುಕಿ ನೋಡಿದ್ದಾರೆ. ಆಗ ಕಾರಿನೊಳಗೆ ಬಿಚ್ಚಿಟ್ಟಿದ್ದ ಪ್ಯಾಂಟ್ ಸಹ ಪತ್ತೆಯಾಗಿದೆ.
Udupi couple have sex inside car in broad daylight, photos go viral. Public who saw the car shaking informed the police later both were taken to the police station.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm