ಬ್ರೇಕಿಂಗ್ ನ್ಯೂಸ್
10-08-24 12:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿಯಾಗಲ್ಲ ಎಂಬುದು ಬಹಳಷ್ಟು ಬಾರಿ ಸಾಬೀತಾಗಿದೆ. ಇದಕ್ಕೊಂದು ಸೇರ್ಪಡೆ ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆ. ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಲ್ಲಿ ಮಂಗಳೂರಿನ ಡಾ| ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ನೆರವೇರಿದೆ.




ಮಂಗಳೂರಿನ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್ಗೆ ತೆರಳಿದ್ದರು. 2019ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. 2023ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
In a heartwarming celebration of love transcending borders, a Mangalurean man and a Brazilian woman were married on Thursday, August 8, at T V Raman Pai Hall. This union not only marks the culmination of a five-year courtship but also beautifully blends two rich and diverse cultures, creating a joyous occasion that has touched many hearts.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm