ಬ್ರೇಕಿಂಗ್ ನ್ಯೂಸ್
10-08-24 12:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿಯಾಗಲ್ಲ ಎಂಬುದು ಬಹಳಷ್ಟು ಬಾರಿ ಸಾಬೀತಾಗಿದೆ. ಇದಕ್ಕೊಂದು ಸೇರ್ಪಡೆ ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆ. ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಲ್ಲಿ ಮಂಗಳೂರಿನ ಡಾ| ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ನೆರವೇರಿದೆ.




ಮಂಗಳೂರಿನ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್ಗೆ ತೆರಳಿದ್ದರು. 2019ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. 2023ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
In a heartwarming celebration of love transcending borders, a Mangalurean man and a Brazilian woman were married on Thursday, August 8, at T V Raman Pai Hall. This union not only marks the culmination of a five-year courtship but also beautifully blends two rich and diverse cultures, creating a joyous occasion that has touched many hearts.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm