ಬ್ರೇಕಿಂಗ್ ನ್ಯೂಸ್
12-08-24 08:14 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.12: ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಮಟ್ಟದ ಛಾಪನ್ನು ಮೂಡಿಸಿದ ಮಂಗಳೂರಿನ ಫಳ್ನೀರಿನ ಇಂದಿರಾ ಆಸ್ಪತ್ರೆ 25ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದು ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಕಾರ್ಯಕ್ರಮ ಹಮ್ಮಿಕೊಂಡಿದೆ. 25 ವರ್ಷಗಳಲ್ಲಿ ಆಸ್ಪತ್ರೆ ಜೊತೆಗೆ ನರ್ಸಿಂಗ್ ಕಾಲೇಜು ಬೃಹತ್ತಾಗಿ ಮತ್ತು ಅತ್ಯಾಧುನಿಕ ವೈದ್ಯಕೀಯ ಕೇಂದ್ರವಾಗಿ ಬೆಳೆದು ನಿಂತಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಸಯ್ಯದ್ ನಿಜಾಮುದ್ದೀನ್ ಹೇಳಿದರು.
1999ರಲ್ಲಿ ಸ್ಥಾಪನೆಯಾದಾಗಿನಿಂದ ಆಸ್ಪತ್ರೆ ಸಾರ್ವಜನಿಕರಿಗೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುತ್ತ ಬಂದಿದೆ. ತುರ್ತು ಆರೈಕೆ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್, ಮೆಟರ್ನಿಟಿ, ಮೆಡಿಸಿನ್, ಫಿಸಿಯೋಥೆರಪಿ ಸೇರಿದಂತೆ ವಿಶಾಲವಾದ ಸೇವೆಗಳನ್ನು ಒದಗಿಸುತ್ತಿದೆ. ಇದರ ಜೊತೆಗೆ, ಇಂದಿರಾ ಎಜ್ಯುಕೇಶನಲ್
ಟ್ರಸ್ಟ್ ಆರಂಭಿಸಿದ್ದು ನರ್ಸಿಂಗ್, ಅಲೈಡ್ ಸೈನ್ಸ್ ಮತ್ತು ಫಿಸಿಯೋಥೆರಪಿ ಕೋರ್ಸ್ಗಳನ್ನು ನೀಡುತ್ತಿದ್ದೇವೆ. 60 ವಿದ್ಯಾರ್ಥಿಗಳಿಂದ ಆರಂಭಗೊಂಡ ನಮ್ಮ ಕಾಲೇಜಿನಲ್ಲಿ ಈಗ ವಿವಿಧ 12 ವಿಭಾಗದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ನೀಡುತ್ತಿದ್ದು 1200 ವಿದ್ಯಾರ್ಥಿಗಳಿದ್ದಾರೆ ಎಂದವರು ಹೇಳಿದರು.


ಇಂದಿರಾ ಆಸ್ಪತ್ರೆ ತನ್ನ ಗೌರವಾನ್ವಿತ ವೈದ್ಯರು ಮತ್ತು ಸಿಬ್ಬಂದಿಯ ಕೊಡುಗೆಗಳನ್ನು ಗೌರವಿಸಲು ವಾರ್ಷಿಕೋತ್ಸವ ಸಂಭ್ರಮ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸಮುದಾಯ ಆರೋಗ್ಯವನ್ನು ಬೆಂಬಲಿಸಲು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. 25ನೇ ವಾರ್ಷಿಕೋತ್ಸವ ಆಚರಣೆ ಆ.15 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ನನ್ ಸೆಂಟರ್ನಲ್ಲಿ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಯೆನೆಪೋಯ ವಿಶ್ವವಿದ್ಯಾಲಯದ ಗೌರವ ಕುಲಪತಿ ಡಾ.ಅಬ್ದುಲ್ಲಾ ಕುಂಞ ಮತ್ತು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ನೋಂದಣಾಧಿಕಾರಿ ಡಾ.ರಿಯಾಜ್ ಬಾಷಾ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ಸಯ್ಯದ್ ಜಮಾಲುದ್ದೀನ್, ಅಶ್ರಫ್ ಉಪಸ್ಥಿತರಿದ್ದರು.
Mangalore Falnir Indira hospital to celebrate 25th anniversary, medical college which started with 60 students has now reached having 1200 students.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm