ಬ್ರೇಕಿಂಗ್ ನ್ಯೂಸ್
12-08-24 08:14 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.12: ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಮಟ್ಟದ ಛಾಪನ್ನು ಮೂಡಿಸಿದ ಮಂಗಳೂರಿನ ಫಳ್ನೀರಿನ ಇಂದಿರಾ ಆಸ್ಪತ್ರೆ 25ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದು ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಕಾರ್ಯಕ್ರಮ ಹಮ್ಮಿಕೊಂಡಿದೆ. 25 ವರ್ಷಗಳಲ್ಲಿ ಆಸ್ಪತ್ರೆ ಜೊತೆಗೆ ನರ್ಸಿಂಗ್ ಕಾಲೇಜು ಬೃಹತ್ತಾಗಿ ಮತ್ತು ಅತ್ಯಾಧುನಿಕ ವೈದ್ಯಕೀಯ ಕೇಂದ್ರವಾಗಿ ಬೆಳೆದು ನಿಂತಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಸಯ್ಯದ್ ನಿಜಾಮುದ್ದೀನ್ ಹೇಳಿದರು.
1999ರಲ್ಲಿ ಸ್ಥಾಪನೆಯಾದಾಗಿನಿಂದ ಆಸ್ಪತ್ರೆ ಸಾರ್ವಜನಿಕರಿಗೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುತ್ತ ಬಂದಿದೆ. ತುರ್ತು ಆರೈಕೆ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್, ಮೆಟರ್ನಿಟಿ, ಮೆಡಿಸಿನ್, ಫಿಸಿಯೋಥೆರಪಿ ಸೇರಿದಂತೆ ವಿಶಾಲವಾದ ಸೇವೆಗಳನ್ನು ಒದಗಿಸುತ್ತಿದೆ. ಇದರ ಜೊತೆಗೆ, ಇಂದಿರಾ ಎಜ್ಯುಕೇಶನಲ್
ಟ್ರಸ್ಟ್ ಆರಂಭಿಸಿದ್ದು ನರ್ಸಿಂಗ್, ಅಲೈಡ್ ಸೈನ್ಸ್ ಮತ್ತು ಫಿಸಿಯೋಥೆರಪಿ ಕೋರ್ಸ್ಗಳನ್ನು ನೀಡುತ್ತಿದ್ದೇವೆ. 60 ವಿದ್ಯಾರ್ಥಿಗಳಿಂದ ಆರಂಭಗೊಂಡ ನಮ್ಮ ಕಾಲೇಜಿನಲ್ಲಿ ಈಗ ವಿವಿಧ 12 ವಿಭಾಗದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ನೀಡುತ್ತಿದ್ದು 1200 ವಿದ್ಯಾರ್ಥಿಗಳಿದ್ದಾರೆ ಎಂದವರು ಹೇಳಿದರು.


ಇಂದಿರಾ ಆಸ್ಪತ್ರೆ ತನ್ನ ಗೌರವಾನ್ವಿತ ವೈದ್ಯರು ಮತ್ತು ಸಿಬ್ಬಂದಿಯ ಕೊಡುಗೆಗಳನ್ನು ಗೌರವಿಸಲು ವಾರ್ಷಿಕೋತ್ಸವ ಸಂಭ್ರಮ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸಮುದಾಯ ಆರೋಗ್ಯವನ್ನು ಬೆಂಬಲಿಸಲು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. 25ನೇ ವಾರ್ಷಿಕೋತ್ಸವ ಆಚರಣೆ ಆ.15 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ನನ್ ಸೆಂಟರ್ನಲ್ಲಿ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಯೆನೆಪೋಯ ವಿಶ್ವವಿದ್ಯಾಲಯದ ಗೌರವ ಕುಲಪತಿ ಡಾ.ಅಬ್ದುಲ್ಲಾ ಕುಂಞ ಮತ್ತು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ನೋಂದಣಾಧಿಕಾರಿ ಡಾ.ರಿಯಾಜ್ ಬಾಷಾ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ಸಯ್ಯದ್ ಜಮಾಲುದ್ದೀನ್, ಅಶ್ರಫ್ ಉಪಸ್ಥಿತರಿದ್ದರು.
Mangalore Falnir Indira hospital to celebrate 25th anniversary, medical college which started with 60 students has now reached having 1200 students.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm