ಬ್ರೇಕಿಂಗ್ ನ್ಯೂಸ್
13-08-24 12:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ರಾಜ್ಯ ಶಿಕ್ಷಣ ಇಲಾಖೆ ಅನುದಾನ ರಹಿತ ಖಾಸಗಿ ಶಾಲೆಗಳ ಮೇಲೆ ಸವಾರಿ ನಡೆಸುತ್ತಿದ್ದು ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿನಾಕಾರಣ ಖಾಸಗಿ ಸಂಸ್ಥೆಗಳಿಗೆ ತೊಂದರೆ ನೀಡುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಆ.21ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಒಂದು ದಿನ ಶಾಲೆ ಮುಚ್ಚಿ ಆಡಳಿತ ಮಂಡಳಿ, ಶಾಲಾ ಸಿಬಂದಿ, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ “ಬೆಂಗಳೂರು ಚಲೋ’ ನಡೆಸಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ )ಕರ್ನಾಟಕದ ಗೌರವಾಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುಮಾರು 64 ಮಾಹಿತಿಗಳನ್ನು ಒದಗಿಸಬೇಕಾಗಿದ್ದು, ಇವುಗಳಿಗೆ ಭಾರೀ ಶುಲ್ಕ ಪಾವತಿಸಬೇಕಾಗಿದೆ. ಅದರಲ್ಲೂ ಅಗ್ನಿ ಸುರಕ್ಷೆ ಬಗ್ಗೆ ದೃಢೀಕರಣ, ಕಟ್ಟಡ ಸುರಕ್ಷೆ ದೃಢೀಕರಣ ಹಾಗೂ ಶಾಲಾ ಕಟ್ಟಡವಿರುವ ನಿವೇಶನವು ಶೈಕ್ಷಣಿಕ ಉದ್ದೇಶಕ್ಕೆ ಭೂ ಪರಿವರ್ತನಾ ಆದೇಶ ಇವುಗಳು ಖಾಸಗಿಯವರಿಗೆ ತೀವ್ರ ಸಂಕಷ್ಟ ತಂದಿದೆ. ಅವುಗಳನ್ನು ಸಡಿಲಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರಕಾರ ತಿರಸ್ಕರಿಸಿದೆ ಎಂದು ಆರೋಪಿಸಿದರು.
ಯಾವುದೇ ಜಾಗದಲ್ಲಿ ಶಾಲೆಗೆ ಕಟ್ಟಡವಿದ್ದರೂ ತೆರಿಗೆ ವಿಧಿಸುವಂತಿಲ್ಲ. ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಕೋರ್ಟ್ ಆದೇಶವಿದೆ. ಆದರೂ ತೆರಿಗೆ ವಸೂಲಾತಿ ನಡೆಸಲಾಗುತ್ತಿದೆ. ಮನವಿ ಸಲ್ಲಿಸಿ ಮೇಲಧಿಕಾರಿಗಳು ಒಪ್ಪಿದರೂ ಕಾರ್ಯಗತವಾಗುವುದಿಲ್ಲ. ಅಲ್ಲದೆ, ತೆರಿಗೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದ.ಕ., ಉಡುಪಿ ಘಟಕದ ಜಿಲ್ಲಾಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣಕರ್ ಮಾತನಾಡಿ, ಸರಕಾರಿ ಶಾಲೆಗಳಿಗೊಂದು ಖಾಸಗಿ ಶಾಲೆಗಳಿಗೊಂದು ನೀತಿಯನ್ನು ಇಲಾಖೆ ಅನುಸರಿಸುತ್ತಿರುವುದು ಸರಿಯಲ್ಲ. ಶಾಲಾ ಕಟ್ಟಡವಿರುವ ನಿವೇಶನದ ಭೂ ಪರಿವರ್ತನಾ ಆದೇಶದ ಬಗ್ಗೆ ವಿನಾಯಿತಿ ನೀಡಬೇಕು. ಅಲ್ಲದೆ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ದಾಖಲಿಸಿ ಆಯ್ದ ಮಕ್ಕಳನ್ನು ಟ್ಯೂಷನ್ ನೀಡುತ್ತಿರುವ ಟ್ಯುಟೋರಿಯಲ್ ದಂಧೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
Mangalore Puranik says private school face renewal issues, warns of Bangalore chalo
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm