ಬ್ರೇಕಿಂಗ್ ನ್ಯೂಸ್
14-08-24 02:24 pm Mangalore Correspondent ಕರಾವಳಿ
ಉಳ್ಳಾಲ, ಆ.14: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿ ರಸ್ತೆಗೆಸೆಯಲ್ಪಟ್ಟಿದ್ದು, ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಸಾವನ್ನಪ್ಪಿದ ರಿಕ್ಷಾ ಚಾಲಕ. ಮಜೀದ್ ನಿನ್ನೆ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕ ಮಹಿಳೆಯರಿಬ್ಬರನ್ನ ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಒಂಭತ್ತುಕೆರೆ, ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ಸಾಗುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿಗೆ ತಲುಪುತ್ತಿದ್ದಂತೆ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ.
ಚಾಲಕನಿಲ್ಲದ ರಿಕ್ಷಾವು ಮುಂದೆ ಚಲಿಸಿದ್ದು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ನಿತ್ಯಾನಂದ ಎಂಬವರ ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಆಟೋ ಕೊಂಚ ಮುಂದೆ ಚಲಿಸಿ ಹೆದ್ದಾರಿಗೆ ನುಗ್ಗುತ್ತಿದ್ದರೆ ಪ್ರಯಾಣಿಕ ಮಹಿಳೆಯರಿಬ್ಬರ ಪ್ರಾಣಕ್ಕೆ ಕಂಟಕ ಎದುರಾಗಲಿತ್ತೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ಆಕೆಯನ್ನ ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರಂತೆ.
ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ದಿನ ನಿತ್ಯವೂ ಬೆಳಗ್ಗೆ ಮತ್ತು ಸಾಯಂಕಾಲದ ವೇಳೆ ತನ್ನ ರಿಕ್ಷಾದಲ್ಲಿ ಮಕ್ಕಳ ಸ್ಕೂಲ್ ಟ್ರಿಪ್ ಮಾಡಿ ಬದುಕು ಸಾಗಿಸುತ್ತಿದ್ದರು. ಅವರು ಪತ್ನಿ, ಒಂದು ಗಂಡು, ಮತ್ತೊಂದು ಹೆಣ್ಣು ಮಗುವನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Auto driver gets heart attack while driving at kotekar, dies on spot. Two passengers escape unhurt. The deceased has been identified as Abdul Majeed native of Ullal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm