ಬ್ರೇಕಿಂಗ್ ನ್ಯೂಸ್
14-08-24 08:42 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಮಂಗಳೂರು ಮೂಲದ ವರುಣ್ ಡಿ'ಕೋಸ್ಟ ಅಂತರಾಷ್ಟ್ರೀಯ ಮಟ್ಟದ ಮಾಡೆಲಿಂಗ್ ವೇದಿಕೆಯಲ್ಲಿ ಛಾಪು ತೋರಿದ್ದು, ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿ ಗೆದ್ದಿದ್ದಾರೆ.
ಮಂಗಳೂರಿನ ಬಜ್ಪೆ ನಿವಾಸಿ, ಎಂಟನೇ ಕ್ಲಾಸ್ ಹುಡುಗ ವರುಣ್ ಡಿ'ಕೋಸ್ಟಾ ಥೈಲ್ಯಾಂಡಿನಲ್ಲಿ ನಡೆದ ಪ್ರಖ್ಯಾತ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಸ್ಪರ್ಧೆಯಲ್ಲಿ ವಿಜೇತರಾಗಿದ್ದು, ಮಂಗಳೂರಿಗೆ ಗರಿಮೆ ತಂದಿದ್ದಾನೆ. ಈ ಸ್ಪರ್ಧೆ ಪ್ರತಿ ವರ್ಷ ಅಂತರಾಷ್ಟ್ರೀಯ ಮಟ್ಟದಲ್ಲಿ ಫ್ಯಾಷನ್, ಮಾಡೆಲಿಂಗ್ ಹಾಗೂ ಪ್ರತಿಭಾ ಪ್ರದರ್ಶನಗಳ ಮೂಲಕ ನಡೆಯುತ್ತದೆ.




ಈ ಸಲದ ಸ್ಪರ್ಧೆಯಲ್ಲಿ ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಓಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ, ನೇಪಾಳ ಸೇರಿದಂತೆ ಹಲವಾರು ದೇಶಗಳ ಸ್ಪರ್ಧಿಗಳು ಪಾಲ್ಗೊಂಡಿದ್ದರು. ವರುಣ್ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಇತರ ಸ್ಪರ್ಧಿಗಳನ್ನು ಹಿಂದಿಕ್ಕಿ, ಭಾರತವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿದ್ದ. ವರುಣ್ ಪ್ರಸ್ತುತ ಮಂಗಳೂರು ಬಜ್ಪೆ ಸೇಂಟ್ ಜೋಸೆಫ್ ಹೈಸ್ಕೂಲ್ನ 8ನೇ ತರಗತಿಯಲ್ಲಿ ಓದುತ್ತಿದ್ದಾನೆ. ತಾಯಿ ಲಿಡಿವಿನ್ ಡಿ'ಕೋಸ್ಟಾ ಮತ್ತು ತಂದೆ ವಿನ್ಸೆಂಟ್ ಡಿ'ಕೋಸ್ಟಾ ಅವರ ನಿರಂತರ ಬೆಂಬಲದಿಂದ ವರುಣ್ ಈ ಸ್ಥಾನಕ್ಕೇರಿದ್ದಾನೆ.
ವಿಜೇ ಡಿಕ್ಸನ್, ಯಶಸ್ವಿನಿ ದೇವಾಡಿಗ, ಸುಧೀರ್ ಉಲ್ಲಾಲ್, ಪ್ರಮೋದ್ ಅಲ್ವಾ, ಕೌಶಿಕ್ ಸುವರ್ಣ, ಸುಮಿತ್, ಕಿಂಗ್ಸ್ ಡ್ಯಾನ್ಸ್ ಅಕಾಡೆಮಿಯ ಸುರೇಶ್ ಮುಕುಂದ್, ನೃತ್ಯ ಶಕ್ತಿಯ ಶಕ್ತಿ ಮೋಹನ್, ಬಿಗ್ ಡ್ಯಾನ್ಸ್ ಸೆಂಟರ್, ಸ್ಪಾಟ್ ಲೈಟ್ ಅಕಾಡೆಮಿ, ಟೆರೆನ್ಸ್ ಲೆವಿಸ್ ಡ್ಯಾನ್ಸ್ ಅಕಾಡೆಮಿ, ಸ್ವೇತಾ ಅರೇಹೋಳೆ, ಪ್ರಮೋದ್ ಆಳ್ವ, ಟ್ವಿಸ್ಟರ್ ಡ್ಯಾನ್ಸ್ ಅಕಾಡೆಮಿಯ ನಿತಿನ್, ಓಷನ್ ಕಿಡ್ಸ್ ನ ಚರಣ್, ಎನ್.ಪಿ ಸ್ಟುಡಿಯೋದ ನಿಕ್ಕಿ ಪಿಂಟೋ, ಆರ್ಯನ್ ಸ್ಟುಡಿಯೋ ನ ನವೀನ್ ಆರ್ಯನ್, ಮುಂಬೈನ ಜೋರ್ಡನ್ ಮತ್ತು ಲವಾನ್ಸ್ ಅವರ ಮಾರ್ಗದರ್ಶನದಲ್ಲಿ ವರುಣ್ ತರಬೇತಿ ಪಡೆದಿದ್ದ. ಡಿಸೈನಿಂಗ್ ಉಡುಪುಗಳನ್ನು ಹೇರಾ ಪಿಂಟೋ ವಿನ್ಯಾಸಗೊಳಿಸಿದರು. ಕಳೆದ ವರ್ಷ ಮಿಸ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿ ಗೆದ್ದ ಯಶಸ್ವಿನಿ ದೇವಾಡಿಗ ಕೂಡ ಮಂಗಳೂರು ಮೂಲದವರು ಎನ್ನೋದು ವಿಶೇಷ.
In a dazzling display of talent and determination, Varun D'Costa, a young star from Mangalore, has proudly brought home the prestigious Mr. Teen Super Globe title. The competition, held in Thailand, is a global event that celebrates fashion, modeling, and talent, with participants from around the world showcasing their skills in talent rounds, grooming sessions, and ramp walks over three exciting days.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm