ಬ್ರೇಕಿಂಗ್ ನ್ಯೂಸ್
15-08-24 09:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.15: ಕೆತ್ತಿಕಲ್ ಭೂಕುಸಿತ ಘಟನೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದ್ದು ಯಾವ ರೀತಿಯ ತಪ್ಪಾಗಿದೆ ಎನ್ನುವ ಬಗ್ಗೆ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು. ಆ ಜಾಗದಲ್ಲಿ 2019ರಿಂದಲೇ ಮಣ್ಣು ಎತ್ತಲಾಗಿದ್ದು, ಆವಾಗಿನಿಂದ ಅಧಿಕಾರಿಗಳು ಯಾರೆಲ್ಲ ಇದ್ದರು ಎನ್ನೋದನ್ನು ನೋಡಬೇಕಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿ ಸೂಚನೆಯಂತೆ ಎರಡು ಎಫ್ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಈಗಾಗಲೇ ಎನ್ಐಟಿಕೆ ಮತ್ತು ಜಿಎಸ್ಐ ವತಿಯಿಂದ ಪ್ರತ್ಯೇಕವಾಗಿ ರಿಪೋರ್ಟ್ ಪಡೆದಿದ್ದೇವೆ. ಕುಸಿತ ತಡೆಯುವುದಕ್ಕೆ ಯಾವ ರೀತಿಯ ಕ್ರಮ ಆಗಬೇಕು ಎನ್ನುವ ವರದಿ ಕೇಳಿದ್ದೇವೆ ಎಂದು ಹೇಳಿದರು. ಇದೇ ವೇಳೆ, ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಡಿಬಿಎಲ್ ಕಂಪನಿ ಮತ್ತು ಖಾಸಗಿ ಭೂಮಾಲಕರ ಮೇಲೆ ಮೈನ್ಸ್ ಮತ್ತು ಜೀಯೋಲಜಿಯಿಂದ ಒಂದು ಎಫ್ಐಆರ್ ದಾಖಲು ಮಾಡಲಾಗಿದೆ. ನೀರು ಶೇಖರಣೆಯ ವೆಟ್ ವೆಲ್ ಗೆ ಅಪಾಯ ಆಗುವಂತೆ ನಡೆದುಕೊಂಡ ಬಗ್ಗೆ ಮಹಾನಗರ ಪಾಲಿಕೆಯಿಂದ ಇನ್ನೊಂದು ಎಫ್ಐಆರ್ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಪರಿಷ್ಕರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಯೋಜನೆಯಾಗಿದ್ದು ಬಡವರನ್ನು ಮೇಲೆತ್ತುವ ದೃಷ್ಟಿಯಿಂದ ಮಾಡಿರುವಂಥದ್ದು. ಅದರಲ್ಲಿ ಲೋಪ ಆಗಿದ್ದರೆ, ಶ್ರೀಮಂತರಿಗೂ ಯೋಜನೆಯ ಲಾಭ ಹೋಗುತ್ತಿದ್ದರೆ ಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡಬಹುದು. ಆದರೆ ಆ ರೀತಿ ಆಗುತ್ತಿರುವುದರ ಬಗ್ಗೆ ಸರ್ವೆಯಿಂದಷ್ಟೆ ತಿಳಿಯಬಹುದು ಎಂದು ಹೇಳಿದರು.
Mangalore Kethikal landslide, FIR against DBL company and private persons over negligence says Minister Dinesh Gundu Rao.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm