ಬ್ರೇಕಿಂಗ್ ನ್ಯೂಸ್
15-08-24 09:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.15: ಕೆತ್ತಿಕಲ್ ಭೂಕುಸಿತ ಘಟನೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದ್ದು ಯಾವ ರೀತಿಯ ತಪ್ಪಾಗಿದೆ ಎನ್ನುವ ಬಗ್ಗೆ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು. ಆ ಜಾಗದಲ್ಲಿ 2019ರಿಂದಲೇ ಮಣ್ಣು ಎತ್ತಲಾಗಿದ್ದು, ಆವಾಗಿನಿಂದ ಅಧಿಕಾರಿಗಳು ಯಾರೆಲ್ಲ ಇದ್ದರು ಎನ್ನೋದನ್ನು ನೋಡಬೇಕಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿ ಸೂಚನೆಯಂತೆ ಎರಡು ಎಫ್ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಈಗಾಗಲೇ ಎನ್ಐಟಿಕೆ ಮತ್ತು ಜಿಎಸ್ಐ ವತಿಯಿಂದ ಪ್ರತ್ಯೇಕವಾಗಿ ರಿಪೋರ್ಟ್ ಪಡೆದಿದ್ದೇವೆ. ಕುಸಿತ ತಡೆಯುವುದಕ್ಕೆ ಯಾವ ರೀತಿಯ ಕ್ರಮ ಆಗಬೇಕು ಎನ್ನುವ ವರದಿ ಕೇಳಿದ್ದೇವೆ ಎಂದು ಹೇಳಿದರು. ಇದೇ ವೇಳೆ, ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಡಿಬಿಎಲ್ ಕಂಪನಿ ಮತ್ತು ಖಾಸಗಿ ಭೂಮಾಲಕರ ಮೇಲೆ ಮೈನ್ಸ್ ಮತ್ತು ಜೀಯೋಲಜಿಯಿಂದ ಒಂದು ಎಫ್ಐಆರ್ ದಾಖಲು ಮಾಡಲಾಗಿದೆ. ನೀರು ಶೇಖರಣೆಯ ವೆಟ್ ವೆಲ್ ಗೆ ಅಪಾಯ ಆಗುವಂತೆ ನಡೆದುಕೊಂಡ ಬಗ್ಗೆ ಮಹಾನಗರ ಪಾಲಿಕೆಯಿಂದ ಇನ್ನೊಂದು ಎಫ್ಐಆರ್ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಪರಿಷ್ಕರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಯೋಜನೆಯಾಗಿದ್ದು ಬಡವರನ್ನು ಮೇಲೆತ್ತುವ ದೃಷ್ಟಿಯಿಂದ ಮಾಡಿರುವಂಥದ್ದು. ಅದರಲ್ಲಿ ಲೋಪ ಆಗಿದ್ದರೆ, ಶ್ರೀಮಂತರಿಗೂ ಯೋಜನೆಯ ಲಾಭ ಹೋಗುತ್ತಿದ್ದರೆ ಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡಬಹುದು. ಆದರೆ ಆ ರೀತಿ ಆಗುತ್ತಿರುವುದರ ಬಗ್ಗೆ ಸರ್ವೆಯಿಂದಷ್ಟೆ ತಿಳಿಯಬಹುದು ಎಂದು ಹೇಳಿದರು.
Mangalore Kethikal landslide, FIR against DBL company and private persons over negligence says Minister Dinesh Gundu Rao.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm