ಬ್ರೇಕಿಂಗ್ ನ್ಯೂಸ್
08-12-20 06:43 pm Mangalore Correspondent ಕರಾವಳಿ
ಬೆಂಗಳೂರು, ಡಿ.8: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಮುಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಹೆಸರನ್ನು ವಿಮಾನ ನಿಲ್ದಾಣಕ್ಕಿಡುವ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಒತ್ತಾಯಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಕೋಟ್ಯಾನ್, ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ, ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದವರು ಕೋಟಿ ಚೆನ್ನಯರು. ಅವಳಿ ವೀರರನ್ನು ಕೇರಳ, ಕರ್ನಾಟಕ, ಮಹಾರಾಷ್ಟ್ರದಲ್ಲಿ ದೇವರ ಸ್ಥಾನದಲ್ಲಿ ಪೂಜಿಸುತ್ತಾರೆ. ರಾಜ್ಯದ ಹೊರಗಿನಲ್ಲಿ 260ಕ್ಕೂ ಹೆಚ್ಚು ಗರಡಿಗಳನ್ನು ಸ್ಥಾಪನೆ ಮಾಡಿದ್ದರು. ಹೀಗಾಗಿ ಜಾತಿ, ಧರ್ಮದ ಭೇದ ಇಲ್ಲದೆ ಕೋಟಿ ಚೆನ್ನಯರು ಪೂಜೆಗೊಳ್ಳುತ್ತಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರುಷ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂಬ ಕರಾವಳಿ ಜನರ ಬಹುಕಾಲದ ಬೇಡಿಕೆಯನ್ನು ಸದನ ಮನ್ನಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಉಮಾನಾಥ ಕೋಟ್ಯಾನ್, ಜನಾಭಿಪ್ರಾಯಕ್ಕೆ ಸ್ಪಂದಿಸಿ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ ಎಂದು ಹೇಳಿದ್ದಾರೆ.
Mulky-Moodbidri MLA Umanath Kotian on Tuesday, December 8 urged the Karnataka Legislative Assembly speaker Vishweshwar Hegde Kageri to recommend the union government to name Mangaluru International Airport after Tulunadu Bravehearts Koti-Chennayya.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm