ಬ್ರೇಕಿಂಗ್ ನ್ಯೂಸ್
08-12-20 06:43 pm Mangalore Correspondent ಕರಾವಳಿ
ಬೆಂಗಳೂರು, ಡಿ.8: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಮುಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಹೆಸರನ್ನು ವಿಮಾನ ನಿಲ್ದಾಣಕ್ಕಿಡುವ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಒತ್ತಾಯಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಕೋಟ್ಯಾನ್, ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ, ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದವರು ಕೋಟಿ ಚೆನ್ನಯರು. ಅವಳಿ ವೀರರನ್ನು ಕೇರಳ, ಕರ್ನಾಟಕ, ಮಹಾರಾಷ್ಟ್ರದಲ್ಲಿ ದೇವರ ಸ್ಥಾನದಲ್ಲಿ ಪೂಜಿಸುತ್ತಾರೆ. ರಾಜ್ಯದ ಹೊರಗಿನಲ್ಲಿ 260ಕ್ಕೂ ಹೆಚ್ಚು ಗರಡಿಗಳನ್ನು ಸ್ಥಾಪನೆ ಮಾಡಿದ್ದರು. ಹೀಗಾಗಿ ಜಾತಿ, ಧರ್ಮದ ಭೇದ ಇಲ್ಲದೆ ಕೋಟಿ ಚೆನ್ನಯರು ಪೂಜೆಗೊಳ್ಳುತ್ತಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರುಷ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂಬ ಕರಾವಳಿ ಜನರ ಬಹುಕಾಲದ ಬೇಡಿಕೆಯನ್ನು ಸದನ ಮನ್ನಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಉಮಾನಾಥ ಕೋಟ್ಯಾನ್, ಜನಾಭಿಪ್ರಾಯಕ್ಕೆ ಸ್ಪಂದಿಸಿ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ ಎಂದು ಹೇಳಿದ್ದಾರೆ.
Mulky-Moodbidri MLA Umanath Kotian on Tuesday, December 8 urged the Karnataka Legislative Assembly speaker Vishweshwar Hegde Kageri to recommend the union government to name Mangaluru International Airport after Tulunadu Bravehearts Koti-Chennayya.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm