ಬ್ರೇಕಿಂಗ್ ನ್ಯೂಸ್
17-08-24 04:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.17: ಕೊಲ್ಕೊತ್ತಾದಲ್ಲಿ ವೈದ್ಯ ಯುವತಿಯನ್ನು ಅತ್ಯಾಚಾರಗೈದು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ವೆನ್ಲಾಕ್ ಹಿಂಭಾಗದಲ್ಲಿರುವ ಭಾರತೀಯ ವೈದ್ಯರ ಸಂಘದ ಜಿಲ್ಲಾ ಘಟಕದ ಕಚೇರಿಯ ಬಳಿ ಸೇರಿದ ವೈದ್ಯರು ಬಳಿಕ ಹಂಪನಕಟ್ಟೆ, ಕ್ಲಾಕ್ ಟವರ್ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಶಾಂತಿಯುತ ನಡಿಗೆಯಲ್ಲಿ ಸಾಗಿದರು. ವೈದ್ಯರು, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಇತರ ಸಿಬಂದಿ ಸೇರಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಸಾಥ್ ಕೊಟ್ಟರು.












ಪ್ರತಿಭಟನಾ ಜಾಥಾದ ನಡುವೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಕೂಡ ಸಾಥ್ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಆವರಣದ ಗೇಟ್ ಬಳಿ ಪೊಲೀಸರು ತಡೆ ಹಾಕಿ, ಹತ್ತು ಮಂದಿಗಷ್ಟೇ ಜಿಲ್ಲಾಧಿಕಾರಿ ಬಳಿಗೆ ಹೋಗಲು ಅವಕಾಶ ನೀಡುತ್ತೇವೆಂದು ಹೇಳಿದರು. ಈ ವೇಳೆ, ಶಾಸಕರು ಮತ್ತು ವೈದ್ಯಕೀಯ ಸಂಘದ ಪ್ರತಿನಿಧಿಗಳು ಹಾಗೂ ಪೊಲೀಸರ ನಡುವೆ ಕೆಲಹೊತ್ತು ಮಾತುಕತೆ ನಡೆಯಿತು. ಶಾಸಕರು ನಾವೆಲ್ಲ ಒಳಗಡೆ ಬರುತ್ತೇವೆ ಎಂದಾಗ, ಡಿಸಿಪಿ ಸಿದ್ಧಾರ್ಥ ಗೋಯಲ್ ಅವಕಾಶ ನೀಡಲಿಲ್ಲ. ಬಳಿಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಬಂದು ವೈದ್ಯರ ಸಂಘದ ಮನವಿಯನ್ನು ಸ್ವೀಕರಿಸಿದರು.
ಇದೇ ವೇಳೆ, ಮಾಧ್ಯಮಕ್ಕೆ ಮಾತನಾಡಿದ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷೆ ಡಾ.ಜೆಸ್ಸಿ ಮರಿಯಾ ಡಿಸೋಜ, ಭಾರತವನ್ನು ಭಾರತ ಮಾತೆಯೆಂದು ಪೂಜಿಸುತ್ತೇವೆ. ತಾಯಿಗೆ ಪವಿತ್ರ ಸ್ಥಾನ ಕೊಟ್ಟ ದೇಶದಲ್ಲಿ ಮಹಿಳೆಗೆ ರಕ್ಷಣೆ ಇಲ್ಲದಾಗಿರುವುದು ದೌರ್ಭಾಗ್ಯ. ಯಾರು ಈ ಅಮಾನುಷ ಕೃತ್ಯ ಮಾಡಿದ್ದಾರೋ ಅವರಿಗೆ ತ್ವರಿತ ಗತಿಯಲ್ಲಿ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದರು. ವೈದ್ಯರ ಸಂಘದ ಡಾ.ರಂಜನ್ ಕಾಮತ್, ಡಾ.ಅವಿನ್ ಆಳ್ವ. ಡಾ.ಮಹಾಬಲ ಶೆಟ್ಟಿ ಮತ್ತಿತರರಿದ್ದರು.
The Indian Medical Association (IMA) Mangaluru Chapter, in collaboration with various voluntary organizations, organized a 'Silent March' on Saturday, August 17, to demand justice and protest against the recent murder of a doctor on duty in Kolkata.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm