ಬ್ರೇಕಿಂಗ್ ನ್ಯೂಸ್
17-08-24 04:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.17: ಕೊಲ್ಕೊತ್ತಾದಲ್ಲಿ ವೈದ್ಯ ಯುವತಿಯನ್ನು ಅತ್ಯಾಚಾರಗೈದು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ವೆನ್ಲಾಕ್ ಹಿಂಭಾಗದಲ್ಲಿರುವ ಭಾರತೀಯ ವೈದ್ಯರ ಸಂಘದ ಜಿಲ್ಲಾ ಘಟಕದ ಕಚೇರಿಯ ಬಳಿ ಸೇರಿದ ವೈದ್ಯರು ಬಳಿಕ ಹಂಪನಕಟ್ಟೆ, ಕ್ಲಾಕ್ ಟವರ್ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಶಾಂತಿಯುತ ನಡಿಗೆಯಲ್ಲಿ ಸಾಗಿದರು. ವೈದ್ಯರು, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಇತರ ಸಿಬಂದಿ ಸೇರಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಸಾಥ್ ಕೊಟ್ಟರು.












ಪ್ರತಿಭಟನಾ ಜಾಥಾದ ನಡುವೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಕೂಡ ಸಾಥ್ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಆವರಣದ ಗೇಟ್ ಬಳಿ ಪೊಲೀಸರು ತಡೆ ಹಾಕಿ, ಹತ್ತು ಮಂದಿಗಷ್ಟೇ ಜಿಲ್ಲಾಧಿಕಾರಿ ಬಳಿಗೆ ಹೋಗಲು ಅವಕಾಶ ನೀಡುತ್ತೇವೆಂದು ಹೇಳಿದರು. ಈ ವೇಳೆ, ಶಾಸಕರು ಮತ್ತು ವೈದ್ಯಕೀಯ ಸಂಘದ ಪ್ರತಿನಿಧಿಗಳು ಹಾಗೂ ಪೊಲೀಸರ ನಡುವೆ ಕೆಲಹೊತ್ತು ಮಾತುಕತೆ ನಡೆಯಿತು. ಶಾಸಕರು ನಾವೆಲ್ಲ ಒಳಗಡೆ ಬರುತ್ತೇವೆ ಎಂದಾಗ, ಡಿಸಿಪಿ ಸಿದ್ಧಾರ್ಥ ಗೋಯಲ್ ಅವಕಾಶ ನೀಡಲಿಲ್ಲ. ಬಳಿಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಬಂದು ವೈದ್ಯರ ಸಂಘದ ಮನವಿಯನ್ನು ಸ್ವೀಕರಿಸಿದರು.
ಇದೇ ವೇಳೆ, ಮಾಧ್ಯಮಕ್ಕೆ ಮಾತನಾಡಿದ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷೆ ಡಾ.ಜೆಸ್ಸಿ ಮರಿಯಾ ಡಿಸೋಜ, ಭಾರತವನ್ನು ಭಾರತ ಮಾತೆಯೆಂದು ಪೂಜಿಸುತ್ತೇವೆ. ತಾಯಿಗೆ ಪವಿತ್ರ ಸ್ಥಾನ ಕೊಟ್ಟ ದೇಶದಲ್ಲಿ ಮಹಿಳೆಗೆ ರಕ್ಷಣೆ ಇಲ್ಲದಾಗಿರುವುದು ದೌರ್ಭಾಗ್ಯ. ಯಾರು ಈ ಅಮಾನುಷ ಕೃತ್ಯ ಮಾಡಿದ್ದಾರೋ ಅವರಿಗೆ ತ್ವರಿತ ಗತಿಯಲ್ಲಿ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದರು. ವೈದ್ಯರ ಸಂಘದ ಡಾ.ರಂಜನ್ ಕಾಮತ್, ಡಾ.ಅವಿನ್ ಆಳ್ವ. ಡಾ.ಮಹಾಬಲ ಶೆಟ್ಟಿ ಮತ್ತಿತರರಿದ್ದರು.
The Indian Medical Association (IMA) Mangaluru Chapter, in collaboration with various voluntary organizations, organized a 'Silent March' on Saturday, August 17, to demand justice and protest against the recent murder of a doctor on duty in Kolkata.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm