ಬ್ರೇಕಿಂಗ್ ನ್ಯೂಸ್
07-08-20 07:03 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 7: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು - ಬೆಂಗಳೂರು ಸಂಚಾರದ ರೈಲ್ವೇ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದೆ.
ಹಾಸನ - ಮಂಗಳೂರು ವಿಭಾಗದ ಸಕಲೇಶಪುರದಿಂದ ಸುಬ್ರಹ್ಮಣ್ಯ ಮಧ್ಯದ ಹಲವು ಕಡೆ ಭೂಕುಸಿತಗಳಾಗಿವೆ. ದೋಣಿಗಲ್ ಮತ್ತು ಕಡಗರವಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದು ಅಲ್ಲಿಂದ ಹರಿದು ಬರುವ ಕೆಸರು ನೀರು ಕಡಗರವಳ್ಳಿ ಮೂಲಕ ಹಾದು ಹೋಗುವ ರೈಲ್ವೇ ಹಳಿಗೆ ಬೀಳುತ್ತಿದೆ. ಇದರಿಂದಾಗಿ ರೈಲು ಹಳಿಯ ಉದ್ದಕ್ಕೂ ಒಂದು ಪಾರ್ಶ್ವ ಕುಸಿದಿದೆ. ಎರಡು ಕಡೆ 15 ಮೀಟರ್ ಉದ್ದಕ್ಕೆ ಕುಸಿದು ನಿಂತಿದ್ದು ಅಪಾಯಕ್ಕೀಡಾಗಿದೆ. ಈ ಭಾಗದಲ್ಲಿ ಹಳಿಯ ಅಡಿ ಭಾಗದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದೆ. ಸಕಲೇಶಪುರದಿಂದ ಆಗಮಿಸಿದ ತಂತ್ರಜ್ಞರು ಕುಸಿತದ ಅಪಾಯ ಇರುವಲ್ಲಿ ಕಲ್ಲು ಮತ್ತು ಹೊಯಿಗೆ ಚೀಲಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಸಕಲೇಶಪುರದಿಂದ ಗೂಡ್ಸ್ ರೈಲಿನಲ್ಲಿ ಮರಳು ಚೀಲ ಮತ್ತು ಸಲಕರಣೆಗಳನ್ನು ತರಲಾಗಿದ್ದು ಮಣ್ಣು ಬಿದ್ದಿರುವ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.

ಲಾಕ್ ಡೌನ್ ಕಾರಣ ಸ್ಥಗಿತಗೊಂಡ ಮಂಗಳೂರು - ಬೆಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ ಪ್ಯಾಸೆಂಜರ್ ರೈಲಿಗೆ ಸದ್ಯಕ್ಕೆ ಅಪಾಯ ಇಲ್ಲ. ಕಳೆದ ವರ್ಷವೂ ಇದೇ ರೀತಿ ಹಾಸನ - ಮಂಗಳೂರು ರೈಲು ಹಳಿ ಈ ಭಾಗದಲ್ಲಿ ಕುಸಿದು ಬಿದ್ದಿತ್ತು. ಗುಡ್ಡ ಕುಸಿದು ರೈಲು ಸಂಚಾರ ವ್ಯತ್ಯಯವಾಗಿತ್ತು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm