ಬ್ರೇಕಿಂಗ್ ನ್ಯೂಸ್
19-08-24 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾ ರೀತಿ ಸ್ಥಿತಿ ಬರಲಿದೆ. ಬಾಂಗ್ಲಾ ಪ್ರಧಾನಿ ರಾತ್ರೋರಾತ್ರಿ ಓಡಿ ಹೋದರಲ್ಲಾ, ಅದೇ ಸ್ಥಿತಿ ರಾಜ್ಯಪಾಲರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಹಮ್ಮಿಕೊಂಡ ಪ್ರತಿಭಟನೆ ಕಾರ್ಯಕ್ರಮದಲ್ಲಿ ವಿವಾದಿತ ಮಾತನ್ನಾಡಿದ್ದಾರೆ. ರಾಜ್ಯಪಾಲರೇ ನಿಮ್ಮಂಥ ಕಳ್ಳ, ಕುತಂತ್ರಿ, ಜನವಿರೋಧಿ ಮತ್ತೊಬ್ಬ ಈ ದೇಶದಲ್ಲಿ ಇಲ್ಲ. ನಿಮ್ಮನ್ನು ನಾವು ಓಡಿಸುತ್ತೇವೆ. ರಾಜ್ಯಪಾಲರ ಕಚೇರಿಗೆ ರಾತ್ರಿಯೇ ಮುತ್ತಿಗೆ ಹಾಕುತ್ತೇವೆ, ರಾಜ್ಯಪಾಲರ ಚಲೋ ಮಾಡ್ತೀವಿ. ಬಿಜೆಪಿ ಕೈಗೊಂಬೆ ರೀತಿ ಇರೋ ರಾಜ್ಯಪಾಲರೇ ಗೆಟ್ ಔಟ್, ಗೆಟ್ ಲಾಸ್ಟ್ ಎಂದು ಐವಾನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಆಮೂಲಕ ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿಯ ಪ್ರತಿಭಟನೆ ಮಾಡ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.















ಐವಾನ್ ಡಿಸೋಜ ಹೇಳಿಕೆ ಬೆನ್ನಲ್ಲೇ ಕೆಲವು ಕಾರ್ಯಕರ್ತರು ಕಿಡಿಗೇಡಿ ಕೃತ್ಯಕ್ಕೆ ಯತ್ನಿಸಿದ್ದಾರೆ. ಒಂದೆಡೆ ಖಾಸಗಿ ಬಸ್ಸಿಗೆ ಕಲ್ಲು ತೂರಿದ್ದು ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದೆ. ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾಗಲೇ ಕಿಡಿಗೇಡಿ ಒಬ್ಬ ಕಲ್ಲು ತೂರಿದ್ದಾನೆ. ಪ್ರಯಾಣಿಕರು ಹೆಚ್ಚಿಲ್ಲದ ಕಾರಣ ಯಾರಿಗೂ ಗಾಯವಾಗಿಲ್ಲ. ಇದೇ ವೇಳೆ ಮತ್ತೊಂದು ಕಡೆ ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡಲೇ ನೀರು ಹಾಕಿ ಬೆಂಕಿ ನಂದಿಸಿದ್ದು ಅಪಾಯದಿಂದ ರಕ್ಷಣೆ ಮಾಡಿದ್ದಾರೆ. ಸಾಕಷ್ಟು ಪೊಲೀಸರು ಸ್ಥಳದಲ್ಲಿ ಇದ್ದರೂ ಅದರ ನಡುವೆಯೇ ಕಿಡಿಗೇಡಿ ಕೃತ್ಯ ನಡೆದಿದೆ.
Mangalore Congress holds protest march condemning Governors sanction for CM Siddaramaiah prosecution, burn tyres, pelt stone on private buses. the protest march proceeded from Lady Hill to Lalbagh. Several prominent leaders participated in the protest organized by the Congress party. District Congress President Harish Kumar, Legislative Council Member Ivan D’Souza, Prakash Rathod, and Ramanath Rai were among those who took part in the march.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm