ಬ್ರೇಕಿಂಗ್ ನ್ಯೂಸ್
20-08-24 06:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿ ನಡುವಿನ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಉಡುಪಿ ಜಿಲ್ಲಾಡಳಿತದ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸಿದೆ. ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆಯ ಬೆಂಬಲವಿದ್ದು ಆಗಸ್ಟ್ 24ರಂದು ನಡೆಯುವ ಪ್ರತಿಭಟನೆಗೆ ಕೈಜೋಡಿಸಲಿದೆ ಎಂದು ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜ್ಯೋತಿಪ್ರಸಾದ್ ಹೆಗ್ಡೆ ಹೇಳಿದರು.
ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಒಳಗಡೆ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿ ರದ್ದಾಗಿದ್ದ ಟೋಲ್ ಅನ್ನು ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ ಎಂದವರು ಆರೋಪಿಸಿದರು.
ದುರ್ಗಾಪ್ರಸಾದ್ ಹೆಗ್ಡೆ ಮಾತನಾಡಿ, ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ. ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಸುದೇಶ್, ಜಯರಾಮ ಶೆಟ್ಟಿ, ಜೀವಂಧರ್ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
Mangalore Canara bus association slams government over setting of another toll plaza after Hejamady.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm