ಬ್ರೇಕಿಂಗ್ ನ್ಯೂಸ್
20-08-24 06:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿ ನಡುವಿನ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಉಡುಪಿ ಜಿಲ್ಲಾಡಳಿತದ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸಿದೆ. ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆಯ ಬೆಂಬಲವಿದ್ದು ಆಗಸ್ಟ್ 24ರಂದು ನಡೆಯುವ ಪ್ರತಿಭಟನೆಗೆ ಕೈಜೋಡಿಸಲಿದೆ ಎಂದು ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜ್ಯೋತಿಪ್ರಸಾದ್ ಹೆಗ್ಡೆ ಹೇಳಿದರು.
ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಒಳಗಡೆ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿ ರದ್ದಾಗಿದ್ದ ಟೋಲ್ ಅನ್ನು ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ ಎಂದವರು ಆರೋಪಿಸಿದರು.
ದುರ್ಗಾಪ್ರಸಾದ್ ಹೆಗ್ಡೆ ಮಾತನಾಡಿ, ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ. ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಸುದೇಶ್, ಜಯರಾಮ ಶೆಟ್ಟಿ, ಜೀವಂಧರ್ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
Mangalore Canara bus association slams government over setting of another toll plaza after Hejamady.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm