ಬ್ರೇಕಿಂಗ್ ನ್ಯೂಸ್
20-08-24 06:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಪಾರದರ್ಶಕ ತನಿಖೆಗೆ ಅನುವಾಗುವಂತೆ ಕೂಡಲೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದರು.
ಈಗಾಗಲೇ ರಾಷ್ಟ್ರಮಟ್ಟದಲ್ಲಿ ಪ್ರಕರಣ ಸದ್ದು ಮಾಡಿದ್ದು ಇಡೀ ದೇಶವೇ ಕರ್ನಾಟಕವನ್ನು ಅನುಮಾನದ ಕಣ್ಣುಗಳಿಂದ ನೋಡುತ್ತಿದೆ. ಈ ಸಂದರ್ಭದಲ್ಲಿ “ನಾನು ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ರಾಜ್ಯಪಾಲರೇ ರಾಜೀನಾಮೆ ನೀಡಲಿ” ಎಂದು ಮೊಂಡುತನ ಪ್ರದರ್ಶಿಸಿದ ಮುಖ್ಯಮಂತ್ರಿಗಳಿಗೆ ಮಂಗಳೂರಿನಲ್ಲಿ ಕಾಂಗ್ರೆಸ್ಸಿನ ಪುಂಡಪೋಕರಿಗಳು ಬಸ್ಸಿಗೆ ಕಲ್ಲು ತೂರಿ ಸಾರ್ವಜನಿಕರಲ್ಲಿ ಭಯಭೀತ ವಾತಾವರಣ ಸೃಷ್ಟಿಸುವ ಮೂಲಕ ಬೆಂಬಲ ನೀಡಿದ್ದಾರೆ. ಕಲ್ಲೆಸೆದ ಕಾಂಗ್ರೆಸ್ಸಿನ ಆರೋಪಿಗಳಿಗೆ ಠಾಣೆಯಲ್ಲಿ ಜಾಮೀನು ನೀಡಿ ಗೌರವದಿಂದ ಬಿಟ್ಟು ಕಳುಹಿಸುವ ಮಟ್ಟಿಗೆ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿರುವುದು ಜಿಲ್ಲೆಯ ಜನತೆಯ ದೌರ್ಭಾಗ್ಯ. ಈ ಬಗ್ಗೆ ಬಸ್ ಮಾಲಕರ, ಚಾಲಕರು ಕೂಡ ತೀವ್ರ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರಾಗಲೀ, ಕಾಂಗ್ರೆಸ್ಸಿನವರಾಗಲೀ ಯಾರೂ ಸಂವಿಧಾನಕ್ಕೆ, ಕಾನೂನಿಗೆ ಅತೀತರಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಸಿದರು.

ಬಾಂಗ್ಲಾದಲ್ಲಿ ನಡೆದ ದಂಗೆಯಂತೆ ಮಂಗಳೂರಿನಲ್ಲು ನಡೆಸಿ ರಾಜ್ಯಪಾಲರ ಕಚೇರಿಗೆ ನುಗ್ಗಿ ಅವರನ್ನು ಓಡಿಸುತ್ತೇವೆ ಎಂದಿರುವ ಐವನ್ ಡಿಸೋಜ ಅವರ ಮೇಲೆ ಸ್ವಯಂಪ್ರೇರಿತ ಕೇಸು ದಾಖಲಿಸುವುದನ್ನು ಬಿಟ್ಟು ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎನ್ನುವ ಪೊಲೀಸರು ಸಿದ್ದರಾಮಯ್ಯ ಬಗ್ಗೆ ಯಾರೋ ಸಾಮಾಜಿಕ ಜಾಲತಾಣದಲ್ಲಿ ಗೀಚಿದ್ದಕ್ಕೆ ಹೇಗೆ ಸುಮೊಟೊ ಕೇಸು ದಾಖಲಿಸಿಕೊಂಡರು? ವಾರ್ಡ್ ಮಟ್ಟದಲ್ಲಿಯೂ ಚುನಾವಣೆಗೆ ನಿಂತು ಗೆಲ್ಲಲಾಗದ ವ್ಯಕ್ತಿಗಳು ಸಿದ್ದರಾಮಯ್ಯನವರಿಗೆ ಬಕೆಟ್ ಹಿಡಿದು ಭಿಕ್ಷೆ ರೂಪದಲ್ಲಿ ಸೀಟು ಗಿಟ್ಟಿಸಿ ಅದರ ಋಣ ಸಂದಾಯಕ್ಕಾಗಿ ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದು ಅಕ್ಷಮ್ಯ. ಕೂಡಲೇ ಭ್ರಷ್ಟಾಚಾರದ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ಇವರ ಮೇಲೆ ದಾಖಲಾಗಬೇಕು ಎಂದು ಶಾಸಕರು ಆಗ್ರಹಿಸಿದರು.
Plan to spoil the name of Mangalore city is done by Congress state government slams MLA Vedavyas kamath.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm