ಬ್ರೇಕಿಂಗ್ ನ್ಯೂಸ್
20-08-24 06:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಪಾರದರ್ಶಕ ತನಿಖೆಗೆ ಅನುವಾಗುವಂತೆ ಕೂಡಲೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದರು.
ಈಗಾಗಲೇ ರಾಷ್ಟ್ರಮಟ್ಟದಲ್ಲಿ ಪ್ರಕರಣ ಸದ್ದು ಮಾಡಿದ್ದು ಇಡೀ ದೇಶವೇ ಕರ್ನಾಟಕವನ್ನು ಅನುಮಾನದ ಕಣ್ಣುಗಳಿಂದ ನೋಡುತ್ತಿದೆ. ಈ ಸಂದರ್ಭದಲ್ಲಿ “ನಾನು ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ರಾಜ್ಯಪಾಲರೇ ರಾಜೀನಾಮೆ ನೀಡಲಿ” ಎಂದು ಮೊಂಡುತನ ಪ್ರದರ್ಶಿಸಿದ ಮುಖ್ಯಮಂತ್ರಿಗಳಿಗೆ ಮಂಗಳೂರಿನಲ್ಲಿ ಕಾಂಗ್ರೆಸ್ಸಿನ ಪುಂಡಪೋಕರಿಗಳು ಬಸ್ಸಿಗೆ ಕಲ್ಲು ತೂರಿ ಸಾರ್ವಜನಿಕರಲ್ಲಿ ಭಯಭೀತ ವಾತಾವರಣ ಸೃಷ್ಟಿಸುವ ಮೂಲಕ ಬೆಂಬಲ ನೀಡಿದ್ದಾರೆ. ಕಲ್ಲೆಸೆದ ಕಾಂಗ್ರೆಸ್ಸಿನ ಆರೋಪಿಗಳಿಗೆ ಠಾಣೆಯಲ್ಲಿ ಜಾಮೀನು ನೀಡಿ ಗೌರವದಿಂದ ಬಿಟ್ಟು ಕಳುಹಿಸುವ ಮಟ್ಟಿಗೆ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿರುವುದು ಜಿಲ್ಲೆಯ ಜನತೆಯ ದೌರ್ಭಾಗ್ಯ. ಈ ಬಗ್ಗೆ ಬಸ್ ಮಾಲಕರ, ಚಾಲಕರು ಕೂಡ ತೀವ್ರ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರಾಗಲೀ, ಕಾಂಗ್ರೆಸ್ಸಿನವರಾಗಲೀ ಯಾರೂ ಸಂವಿಧಾನಕ್ಕೆ, ಕಾನೂನಿಗೆ ಅತೀತರಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಸಿದರು.

ಬಾಂಗ್ಲಾದಲ್ಲಿ ನಡೆದ ದಂಗೆಯಂತೆ ಮಂಗಳೂರಿನಲ್ಲು ನಡೆಸಿ ರಾಜ್ಯಪಾಲರ ಕಚೇರಿಗೆ ನುಗ್ಗಿ ಅವರನ್ನು ಓಡಿಸುತ್ತೇವೆ ಎಂದಿರುವ ಐವನ್ ಡಿಸೋಜ ಅವರ ಮೇಲೆ ಸ್ವಯಂಪ್ರೇರಿತ ಕೇಸು ದಾಖಲಿಸುವುದನ್ನು ಬಿಟ್ಟು ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎನ್ನುವ ಪೊಲೀಸರು ಸಿದ್ದರಾಮಯ್ಯ ಬಗ್ಗೆ ಯಾರೋ ಸಾಮಾಜಿಕ ಜಾಲತಾಣದಲ್ಲಿ ಗೀಚಿದ್ದಕ್ಕೆ ಹೇಗೆ ಸುಮೊಟೊ ಕೇಸು ದಾಖಲಿಸಿಕೊಂಡರು? ವಾರ್ಡ್ ಮಟ್ಟದಲ್ಲಿಯೂ ಚುನಾವಣೆಗೆ ನಿಂತು ಗೆಲ್ಲಲಾಗದ ವ್ಯಕ್ತಿಗಳು ಸಿದ್ದರಾಮಯ್ಯನವರಿಗೆ ಬಕೆಟ್ ಹಿಡಿದು ಭಿಕ್ಷೆ ರೂಪದಲ್ಲಿ ಸೀಟು ಗಿಟ್ಟಿಸಿ ಅದರ ಋಣ ಸಂದಾಯಕ್ಕಾಗಿ ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದು ಅಕ್ಷಮ್ಯ. ಕೂಡಲೇ ಭ್ರಷ್ಟಾಚಾರದ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ಇವರ ಮೇಲೆ ದಾಖಲಾಗಬೇಕು ಎಂದು ಶಾಸಕರು ಆಗ್ರಹಿಸಿದರು.
Plan to spoil the name of Mangalore city is done by Congress state government slams MLA Vedavyas kamath.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm