ಬ್ರೇಕಿಂಗ್ ನ್ಯೂಸ್
20-08-24 11:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 20: ಮೊಬೈಲ್ ಬಳಕೆಯ ಬಗ್ಗೆ ಹೆತ್ತವರು ಗದರಿಸಿದ್ದಕ್ಕೆ ಇಬ್ಬರು ಅಪ್ರಾಪ್ತ ಮಕ್ಕಳು ಸಾವಿಗೆ ಶರಣಾದ ಪ್ರತ್ಯೇಕ ಘಟನೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಪಿಯುಸಿ ವಿದ್ಯಾರ್ಥಿ ಪ್ರಥಮೇಶ್ ಬ್ಯಾಗ್ ಸಹಿತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಜಾರ್ಖಂಡ್ ಮೂಲದ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದಾಳೆ.
ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗು ಅಂಜಾರು ಪೊಲೀಸ್ ಕ್ವಾರ್ಟರ್ಸ್ ಬಳಿಯ ನಿವಾಸಿ ಪ್ರಥಮೇಶ್ (17) ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಚಾಳಿ ಕಡಿಮೆ ಮಾಡಲು ಮನೆಯವರು ಮೊಬೈಲ್ ತೆಗೆದಿಟ್ಟಿದ್ದರು. ಕಾಲೇಜಿಗೆಂದು ತೆರಳಿದ್ದ ವಿದ್ಯಾರ್ಥಿ, ಅತ್ತ ಕಾಲೇಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಸೋಮವಾರ ಎಷ್ಟು ಹುಡುಕಿದರೂ ಹುಡುಗ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಸಮೀಪ ಜನವಸತಿ ರಹಿತ ಬಾವಿಯಲ್ಲಿ ಶಾಲಾ ಬ್ಯಾಗ್ ತೇಲುತ್ತಿರುವ ಮಾಹಿತಿ ಲಭಿಸಿತ್ತು. ಪೊಲೀಸರು ಹುಡುಕಾಡಿ ಬಾವಿಯಿಂದ ವಿದ್ಯಾರ್ಥಿಯ ಮೃತದೇಹ ಹೊರ ತೆಗೆದಿದ್ದಾರೆ.
ಮೊಬೈಲ್ ಗೀಳು, ತಾಯಿಗೆ ಗೋಳು
ಮೊಬೈಲ್ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿ ಬಗ್ಗೆ ಮುನಿಸಿಕೊಂಡ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದಲ್ಲಿ ನಡೆದಿದೆ. ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ ಬಾಲಕಿ ನೀಲಮ್ ಮೃತಳು. ಜಾರ್ಖಂಡ್ನ ಲಾತೆಹಾರ್ ಜಿಲ್ಲೆ ನಿವಾಸಿ ಸರ್ಜು ಬುಯ್ಯಾನ್ ಎಂಬವರು ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ಭಾನುವಾರ ಸಂಜೆ ಮಗಳು ಮೊಬೈಲ್ ವಿಚಾರದಲ್ಲಿ ಸಿಟ್ಟಿಗೆದ್ದು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ.
Mangalore Udupi Mobile addict, two suicide cases registered over parents shouting over mobile use.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm