ಬ್ರೇಕಿಂಗ್ ನ್ಯೂಸ್
09-12-20 11:55 am Mangalore Correspondent ಕರಾವಳಿ
ಬೆಳ್ತಂಗಡಿ, ಡಿ.9: ಇಲ್ಲಿನ ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ. ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಾಳ ನಿವಾಸಿ ರಮೇಶ್ (48) ಮೃತರು.
ಸೋಮಾವತಿ ನದಿಯಲ್ಲಿ ಪಂಪ್ ಹೌಸ್ ಬಳಿಯ ಗುಂಡಿಯಲ್ಲಿ ಇಬ್ಬರು ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಮುಳುಗು ಪರಿಣತರು ಹುಡುಕಾಟ ಆರಂಭಿಸಿದ್ದರು.
ನದಿ ತಟದಲ್ಲಿ ಮೊಬೈಲ್ ಫೋನ್ ಮತ್ತು ಮೀನು ಹಿಡಿಯುವ ಪರಿಕರಗಳು ಪತ್ತೆಯಾಗಿದ್ದರಿಂದ ನದಿ ನೀರಿನಲ್ಲಿ ಯಾರೋ ಮುಳುಗಿದ್ದಾರೆ ಎಂಬ ಅನುಮಾನ ಇತ್ತು. ಈ ವೇಳೆಗೆ ರೆಂಜಾಳ ನಿವಾಸಿ ರಮೇಶ್ ಅವರ ಸಹೋದರ ಮಾಹಿತಿ ನೀಡಿ, ಸೋಮವಾರ ಸಂಜೆ ಮೀನು ಹಿಡಿಯಲು ಹೋಗಿದ್ದ ಅಣ್ಣನ ಮೊಬೈಲ್ ಫೋನ್ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸ್ವಿಚ್ ಆಫ್ ಬರುತ್ತಿರುವ ಬಗ್ಗೆ ಹೇಳಿದ್ದರು. ಬಳಿಕ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ನಡೆಸಿದ ಕಾರ್ಯಾಚರಣೆ ವೇಳೆ ರಮೇಶ್ ಅವರ ಮೃತದೇಹ ಹೊಳೆಯ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A person who had been to the river for fishing drowned on Monday, December 7 at Belthangady. A person who was with the victim reportedly did not inform anyone else about the tragedy but ran away from the spot. He was arrested later.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am