ಬ್ರೇಕಿಂಗ್ ನ್ಯೂಸ್
21-08-24 09:44 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮೂರ್ಛೆಯಿಂದ ಎದ್ದು ಕೂತಿದೆ. ಐವನ್ ರನ್ನು ಹೀಯಾಳಿಸುವ ನೆಪದಲ್ಲಿ ನಿದ್ದೆಯಿಂದ ಎದ್ದು ಕುಳಿತಿದ್ದು ಖುಷಿ ಕೊಟ್ಟಿದೆ. ಆದರೆ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಸಂದರ್ಭದಲ್ಲಿ ನಿಮ್ಮ ಮೋರ್ಚಾ ಎಲ್ಲಿತ್ತು. ವ್ಯಾಪಾರ ನಿಷೇಧ ಮಾಡಿದಾಗ, ಕೊಲೆಗಳಾದಾಗ ನೀವು ಎಲ್ಲಿದ್ದಿರಿ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ತಿರುಗೇಟು ನೀಡಿದ್ದಾರೆ.
ಬಾಂಗ್ಲಾ ಪರ ಹೇಳಿಕೆ ನೀಡಿದ ಐವನ್ ಡಿಸೋಜ ಹಿಂಬಾಗಿಲಲ್ಲಿ ಬಂದವರು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕರು ಹೇಳಿರುವ ಮಾತಿಗೆ ತಿರುಗೇಟು ನೀಡಲು ಸುದ್ದಿಗೋಷ್ಟಿ ನಡೆಸಿದ ಶಾಹುಲ್ ಹಮೀದ್, ಎರಡು ವರ್ಷ ಹಿಂದೆ ಫಾಜಿಲ್ ಎಂಬ ಯುವಕ ರಸ್ತೆ ಬದಿ ನಿಂತಿದ್ದಾಗ ಕೊಂದು ಹಾಕಿದ್ರಲ್ಲಾ, ಆಗ ನೀವು ಎಲ್ಲಿದ್ದಿರಿ. ಸಿಟಿ ರವಿ, ಶೋಭಾ ಕರಂದ್ಲಾಜೆ ಮಸೀದಿ ಬಗ್ಗೆ ಹೇಳಿಕೆ ಕೊಟ್ಟಾಗ ನೀವು ಎಲ್ಲಿದ್ದಿರಿ. ಬೆಳ್ತಂಗಡಿ ಶಾಸಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಹಿಂದುಗಳು ಹೋಗಬಾರದು ಎಂದಾಗ ನೀವು ಮಾತಾಡಿಲ್ಲ ಯಾಕೆ. ಇಡೀ ರಾಜ್ಯದಲ್ಲಿ ಒಂದು ಸೀಟು ಪಡೆಯಲು ಆಗದ ನಿಮಗೆ ಮಾನ ಮರ್ಯಾದೆ ಇದೆಯಾ.. ಎಂಎಲ್ಸಿ ಬಿಡಿ, ಒಂದು ಮೇಯರ್, ಜಿಪಂ ಸ್ಥಾನ ತೆಗೆಸುವುದಕ್ಕಾದರೂ ಆಗಿದೆಯಾ.. ಯಾಕೆ ನೀವು ಬಕೆಟ್ ಹಿಡಿಯುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು.
ಐವಾನ್ ಡಿಸೋಜ ಎರಡನೇ ಬಾರಿ ಪರಿಷತ್ ಸದಸ್ಯರಾಗಿದ್ದಾರೆ. ನಿಮ್ಮ ಪ್ರತಾಪಸಿಂಹ ನಾಯಕ್, ಸಿಟಿ ರವಿ ಸೋತು ಸುಣ್ಣವಾದ ಬಳಿಕ ಹಿಂಬಾಗಿಲಲ್ಲಿ ಹೋಗಿದ್ದಲ್ವಾ. ನಿಮಗೆ ಹಿಂಬಾಗಿಲು ಬಿಡಿ ಶೌಚಾಲಯದ ಬಾಗಿಲೂ ಸಿಗಲ್ಲ. ಐವಾನ್ ಡಿಸೋಜ ಶ್ರಮಿಕ ವರ್ಗದ ನಾಯಕ. ಗ್ರಾಪಂ ಸ್ತರದಿಂದ ಮೇಲೆ ಬಂದವರು. ಎರಡು ಬಾರಿ ಅಸೆಂಬ್ಲಿಗೆ ಸ್ಪರ್ಧಿಸಿದ್ದಾರೆ. ಹೀಯಾಳಿಸುವ ಬದಲು ಮೋರ್ಚಾ ಬರ್ಖಾಸ್ತು ಮಾಡಿ ಹೊರಬನ್ನಿ ಎಂದರು. ಬಾಂಗ್ಲಾದಲ್ಲಿ ಸರ್ವಾಧಿಕಾರ, ಭ್ರಷ್ಟಾಚಾರ ಮೇಳೈಸಿತ್ತು. ಅಧಿಕಾರ ದುರುಪಯೋಗ ತಾಳಲಾರದೆ ಜನರು ದಂಗೆ ಎದ್ದಿದ್ದಾರೆ. ಅದೇ ರೀತಿ ನಮ್ಮಲ್ಲೂ ಆದರೆ ಜನರು ದಂಗೆ ಏಳಬಹುದು ಅಂತ ಐವಾನ್ ಡಿಸೋಜ ಹೇಳಿದ್ದಾರೆ ಎಂದಷ್ಟೇ ಪ್ರಶ್ನಿಸಿದ್ದಾರೆ. ಆಲ್ವಿನ್ ಪ್ರಕಾಶ್, ಇಬ್ರಾಹಿಂ ಕೋಡಿಜಾಲ್, ಸಬಿತಾ ಮಿಸ್ಕಿತ್, ಫಯಾಜ್, ನಜೀರ್ ಬಜಾಲ್, ಶಬೀರ್ ಸಿದ್ದಕಟ್ಟೆ ಮತ್ತಿತರರಿದ್ದರು.
Ivan dsouza remarks, congress Shahul Ahmeed slams BJP Morcha in Mangalore
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm