ಬ್ರೇಕಿಂಗ್ ನ್ಯೂಸ್
22-08-24 07:15 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 22: ಬಂಟ್ವಾಳ ಪುರಸಭೆಯಲ್ಲಿ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆದಿದ್ದು, ಅಧಿಕಾರಕ್ಕಾಗಿ ಕಾಂಗ್ರೆಸ್ ಮತ್ತು ಎಸ್ಡಿಪಿಐ ಮತ್ತೆ ಕೈಜೋಡಿಸಿದೆ. ಅಧ್ಯಕ್ಷರಾಗಿ ಕಾಂಗ್ರೆಸಿನ ಬಿ.ವಾಸು ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ಎಸ್.ಡಿ.ಪಿ.ಐ. ಪಕ್ಷದ ಮೊನೀಶ್ ಆಲಿ ಆಯ್ಕೆಯಾಗಿದ್ದಾರೆ.
ಒಟ್ಟು 27 ಸದಸ್ಯರ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಗಂಗಾಧರ ಎಂಬವರ ರಾಜೀನಾಮೆಯಿಂದ ಒಟ್ಟು ಸದಸ್ಯ ಬಲ 26ಕ್ಕೆ ಕುಸಿದಿತ್ತು. ಕಾಂಗ್ರೆಸ್ ನಿಂದ 11, ಬಿಜೆಪಿಯಿಂದ 11, ಎಸ್.ಡಿ.ಪಿ.ಐ.ನಿಂದ 4 ಮಂದಿ ಸದಸ್ಯರು ಇದ್ದರು. ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಸಂದರ್ಭ ಸಂಸದ ಮತ್ತು ಬಂಟ್ವಾಳ ಶಾಸಕರ ಸದಸ್ಯರ ಮತ ಸೇರಿ ಬಿಜೆಪಿಗೆ 13, ಕಾಂಗ್ರೆಸ್ 11 ಮತ್ತು ಎಸ್.ಡಿ.ಪಿ.ಐ.ಗೆ 4 ಮತಗಳಿದ್ದವು. ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್- ಎಸ್.ಡಿ.ಪಿ.ಐ. ಅಭ್ಯರ್ಥಿಗಳಿಗೆ 15, ಬಿಜೆಪಿ ಅಭ್ಯರ್ಥಿಗಳಿಗೆ 13 ಮತಗಳು ಲಭಿಸಿದವು.

ನಾಮಪತ್ರ ಸಲ್ಲಿಕೆ ಸಂದರ್ಭ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬಿ. ವಾಸು ಪೂಜಾರಿ, ಎಸ್.ಡಿ.ಪಿ.ಐ.ನಿಂದ ಇದ್ರೀಸ್ ಹಾಗೂ ಬಿಜೆಪಿಯ ಎ.ಗೋವಿಂದ ಪ್ರಭು ಸ್ಪರ್ಧೆಗಿಳಿದಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಇಳಿಸದೆ, ಪರೋಕ್ಷವಾಗಿ ಎಸ್.ಡಿ.ಪಿ.ಐ. ಅಭ್ಯರ್ಥಿ ಮೊನೀಶ್ ಆಲಿ ಅವರನ್ನು ಬೆಂಬಲಿಸುವ ಸೂಚನೆ ನೀಡಿತ್ತು. ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಹರಿಪ್ರಸಾದ್ ಅವರನ್ನು ಕಣಕ್ಕಿಳಿಸಿತ್ತು. ಎಸ್.ಡಿ.ಪಿ.ಐ.ನ ಇದ್ರೀಸ್ ಅಧ್ಯಕ್ಷ ಕಣದಿಂದ ಹಿಂದಕ್ಕೆ ಸರಿದರು. ನಿರೀಕ್ಷೆಯಂತೆ ಚುನಾವಣೆ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್, ಉಪಾಧ್ಯಕ್ಷ ಸ್ಥಾನಕ್ಕೆ ಎಸ್.ಡಿ.ಪಿ.ಐ. ಅಭ್ಯರ್ಥಿಗೆ ಪರಸ್ಪರ ಮತ ಚಲಾಯಿಸಿದ್ದರಿಂದ ಇವರ ಮೈತ್ರಿ ಜಯ ಗಳಿಸಿತು. ತಹಸೀಲ್ದಾರ್ ಡಿ.ಅರ್ಚನಾ ಭಟ್ ಚುನಾವಣೆ ಕಾರ್ಯ ನಡೆಸಿಕೊಟ್ಟರು.
ಎಸ್.ಡಿ.ಪಿ.ಐ. ನಿರ್ಣಾಯಕ !
ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಮಹಮ್ಮದ್ ಶರೀಫ್ ಮತ್ತು ಜೆಸಿಂತಾ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಸಂದರ್ಭ ಎಸ್.ಡಿ.ಪಿ.ಐ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆ ಸಂದರ್ಭ ಕಾಂಗ್ರೆಸ್, ಎಸ್.ಡಿ.ಪಿ.ಐ. ಜೊತೆ ತಾನು ಹೊಂದಾಣಿಕೆ ಮಾಡಿಕೊಂಡಿಲ್ಲ, ಅವರೇ ನಮ್ಮನ್ನು ಬೆಂಬಲಿಸಿದರು ಎಂದು ಹೇಳಿ ಕೋಮುವಾದಿ ಮೈತ್ರಿಯೆಂಬ ಟೀಕೆಯಿಂದ ದೂರವುಳಿದಿತ್ತು. ಈ ಬಾರಿ ಕಾಂಗ್ರೆಸ್ ಪಕ್ಷವೇ ಎಸ್.ಡಿ.ಪಿ.ಐ. ಅಭ್ಯರ್ಥಿಗೆ ಮತ ಹಾಕುವ ಮೂಲಕ ಅಧಿಕಾರಕ್ಕಾಗಿ ನೇರ ಬೆಂಬಲ ನೀಡಿದೆ.
ಕಾಂಗ್ರೆಸ್ ಅಸಲಿತನ ಬಯಲು
ಚುನಾವಣೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪಾಲ್ಗೊಂಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಕಾಂಗ್ರೆಸ್ ಪಕ್ಷದ ಅಸಲಿತನ ಬಯಲಾಗಿದ್ದು, ರಮಾನಾಥ ರೈ ಕಾಂಗ್ರೆಸ್ ಎಸ್.ಡಿ.ಪಿ.ಐ. ಮುಷ್ಟಿಯೊಳಗೆ ಸಿಲುಕಿದೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ.ನಿಂದ ಬಿಜೆಪಿಗೆ ಹೆಚ್ಚು ಮತಗಳಿದ್ದರೂ ಕಾಂಗ್ರೆಸ್ ಮೈತ್ರಿಯಿಂದ ಇವರ ನಿಜಬಣ್ಣ ಗೊತ್ತಾಗಿದೆ ಎಂದರು. ಶಾಸಕ ರಾಜೇಶ್ ನಾಯ್ಕ್, ಪಕ್ಷದ ಕ್ಷೇತ್ರಾಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಜತೆಗಿದ್ದರು.
Mangalore Bantwal town municipal elections, congress president, SDPI bags vice president posts.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm