ಬ್ರೇಕಿಂಗ್ ನ್ಯೂಸ್
22-08-24 10:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಮಂಗಳೂರು ನಾಗರಿಕರ ಹಲವು ವರ್ಷಗಳ ಬೇಡಿಕೆಯಾಗಿರುವ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ವೃತ್ತದಲ್ಲಿ ರಸ್ತೆ ಅಗಲೀಕರಣ ಮತ್ತು ಬೈಪಾಸ್ ರಸ್ತೆಯ ಪೂರ್ವ ಹಂತದ ಕಾಮಗಾರಿ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಗುರುವಾರ ಸಂಜೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತೂರು ವೃತ್ತವು ಹೆದ್ದಾರಿ ವ್ಯಾಪ್ತಿಯಲ್ಲಿದ್ದು, ದಿನ ನಿತ್ಯವೂ ಹೆಚ್ಚಿನ ವಾಹನ ದಟ್ಟಣೆ ಇರುವ ಕಾರಣ ಪೂರ್ಣ ಹಂತದ ಕಾಮಗಾರಿ ಆರಂಭಿಸುವುದಕ್ಕೂ ಮೊದಲು ಟ್ರಾಫಿಕ್ ಸಮಸ್ಯೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹೀಗಾಗಿ, ಸಂಸದರು ಈ ವಿಚಾರಗಳ ಬಗ್ಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜತೆಗೆ ಚರ್ಚಿಸಿ ಕೆಲವು ಪೂರಕ ಸಲಹೆಗಳನ್ನು ನೀಡಿದ್ದಾರೆ. ರಸ್ತೆ ಯಾವ ರೀತಿ ಬರತ್ತೆ ಮತ್ತು ಅದಕ್ಕು ಮುನ್ನ ಟ್ರಾಫಿಕ್ ಸಮಸ್ಯೆ ಆಗದಂತೆ ಹೇಗೆ ನೋಡಿಕೊಳ್ಳಬೇಕು ಎನ್ನುವ ಬಗ್ಗೆ ಸೂಚನೆಗಳನ್ನು ಕೊಟ್ಟಿದ್ದಾರೆ.
ಇದೇ ವೇಳೆ ಸಂಸದ ಕ್ಯಾ. ಚೌಟ ಅವರು ರಸ್ತೆ ಅಗಲೀಕರಣಕ್ಕೆ ಭೂಮಿ ಬಿಟ್ಟು ಕೊಟ್ಟಿರುವ ಸ್ಥಳೀಯ ನಿವಾಸಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಅಲ್ಲದೆ, ಸ್ಥಳೀಯ ಜನರನ್ನು ನೇರವಾಗಿ ಭೇಟಿಯಾಗಿ ರಸ್ತೆ ಅಗಲೀಕರಣಕ್ಕೆ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ನಂತೂರು ಮತ್ತು ಕೆಪಿಟಿ ವೃತ್ತದ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಆಗಿದ್ದರೂ ಮಂಗಳೂರು ನಗರವನ್ನು ಹಾದು ಹೋಗುವುದರಿಂದ ಇಡೀ ದಿನ ಟ್ರಾಫಿಕ್ ಸಮಸ್ಯೆಯಾಗಿದೆ. ಈ ಭಾಗದಲ್ಲಿ ರಸ್ತೆ ಅಗಲೀಕರಣ ಆಗೋದಕ್ಕೂ ಮೊದಲು ಪರ್ಯಾಯ ಸರ್ವಿಸ್ ರಸ್ತೆ ಮಾಡಿ ಕೊಡಬೇಕು. ಆನಂತರವೇ, ನಿರ್ದಿಷ್ಟ ಸಮಯದ ಮಿತಿಯಲ್ಲಿ ರಸ್ತೆ ಕಾಮಗಾರಿ ಆರಂಭಿಸಬೇಕು ಎಂದು ಹೆದ್ದಾರಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ ನೀಡಿದ್ದಾರೆ. ಹೀಗಾಗಿ ಆರಂಭದಲ್ಲಿ ನಂತೂರು ವೃತ್ತದ ಆಸುಪಾಸಿನಲ್ಲಿ ಕಾಮಗಾರಿ ಆರಂಭಗೊಂಡಿದೆ.
Mangalore MP Chowta Directs NHAI to make service road first before road extension. MP captian Brijesh Chowta also visited that have given their lands for the extension for roads.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm