ಬ್ರೇಕಿಂಗ್ ನ್ಯೂಸ್
24-08-24 10:34 pm Mangalore Correspondent ಕರಾವಳಿ
ಬೆಂಗಳೂರು, ಆ 24: ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಜಫರು ಮಳೆಯಾಗಿದ್ದರೆ, ಇತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕಲಬುರ್ಗಿ, ವಿಜಯಪುರ ಯಾದಗಿರಿ ಹಾಗೂ ಶಿವಮೊಗ್ಗದಲ್ಲೂ ಅತಿ ಭಾರೀ ಮಳೆಯಾಗಿದೆ
ಮುಂದಿನ ಎರಡು ದಿನ ಕರಾವಳಿಗೆ ವರುಣಾರ್ಭಟ ಭಾನುವಾರ ಹಾಗೂ ಸೋಮವಾರ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಅತಿಭಾರೀ ಮಳೆಯಾಗುವ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಆಗಸ್ಟ್ 30 ರವರೆಗೂ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಭಾನುವಾರ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಮವಾರದಿಂದ ಮಳೆ ಪ್ರಮಾಣ ಇಳಿಕೆಯಾಗಲಿದ್ದು, ಆಗಸ್ಟ್ 29,30 ರ ನಂತರ ಭಾರೀ ಮಳೆಯಾಗಲಿರುವ ಹಿನ್ನಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡದಲ್ಲಿ ಭಾರೀ ಮಳೆ ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಜೋರಾಗಿದೆ. ಶುಕ್ರವಾರ ರಾತ್ರಿಯಿಂದ ಶನಿವಾರ ದಿನವಿಡೀ ಮಳೆ ರಭಸವಾಗಿ ಅಬ್ಬರಿಸಿದ್ದು, ಕರಾವಳಿ ಭಾಗದಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ. ಮಳೆ, ಗಾಳಿ ರಭಸ ಹೆಚ್ಚಾಗಿದೆ. ಇದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಿ ತೀರದಲ್ಲಿಆರ್ಭಟಿಸುತ್ತಿವೆ. ಕಡಲ ಕೊರೆತವೂ ಹೆಚ್ಚಾಗಿದೆ. ಕಾರವಾರ, ಅಂಕೋಲಾ, ಗೋಕರ್ಣದಲ್ಲಿಸಮುದ್ರ ತೀರಗಳಿಗೆ ಹಾನಿಯಾಗಿವೆ. ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ403.6 ಮಿ.ಮೀ. ಮಳೆಯಾಗಿದೆ. ಕಾರವಾರ, ಅಂಕೋಲಾ, ಹೊನ್ನಾವರ, ಶಿರಸಿಯಲ್ಲಿ ಹೆಚ್ಚಿನ ಮಳೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಾಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಳಸಮುದ್ರದ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆ ಕೂಡ ನೀಡಲಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಶನಿವಾರ ಬೆಳಗ್ಗೆವರೆಗೆ ಸುರಿದ ಮಳೆಯಲ್ಲಿಐದು ಮನೆಗಳಿಗೆ ಹಾನಿಯಾಗಿದೆ. ಕಾರವಾರ, ಕುಮಟಾದಲ್ಲಿತಲಾ ಒಂದು ಕಾಳಜಿ ಕೇಂದ್ರ ತೆರೆಯಲಾಗಿದ್ದು, 88 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
Heavy rains expected in coastal districts Orange alert declared.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm