ಬ್ರೇಕಿಂಗ್ ನ್ಯೂಸ್
27-08-24 09:37 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 27: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರು ನಗರದ 8ನೇ ಜೆಎಂಎಫ್ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ.
ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಎಂಬವರು ತಮ್ಮಿಂದ 41 ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು 2021ರಲ್ಲಿ ನಟಿ ಪದ್ಮಜಾ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಗೆ ಪದ್ಮಜಾ ರಾವ್ ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಲು ಬಂದ ಸಂದರ್ಭ ಪರಿಚಯವಾಗಿದ್ದರು. ಬಳಿಕ ವೀರೇಂದ್ರ ಶೆಟ್ಟಿಯವರ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಟಿ ಪದ್ಮಜಾ ಹಂತ ಹಂತವಾಗಿ 41 ಲಕ್ಷ ರೂ. ಸಾಲವನ್ನು ಪಡೆದಿದ್ದರು. ಸಾಲದ ಭದ್ರತೆಗೆ ಅವರು 40 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಪದ್ಮಜಾ ರಾವ್ ಮನೆಯಿಂದ ಚೆಕ್ ಕಳವು ಮಾಡಿ ಸಹಿಯನ್ನು ಪೋರ್ಜರಿ ಮಾಡಲಾಗಿದೆ ಎಂದು ಪದ್ಮಜಾ ರಾವ್ ಪರ ವಕೀಲರು ಕೋರ್ಟಿನಲ್ಲಿ ವಾದಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.
ಆದರೆ ಪದ್ಮಜಾ ರಾವ್ ಅವರು ಸಾಲ ಹಿಂತಿರುಗಿಸದ್ದರಿಂದ ವೀರೇಂದ್ರ ಅವರು ಚೆಕ್ ನಗದೀಕರಣಕ್ಕೆ ಮುಂದಾಗಿದ್ದು ಬ್ಯಾಂಕ್ನಲ್ಲಿ ಹಣವಿಲ್ಲದ್ದರಿಂದ ಚೆಕ್ ಬೌನ್ಸ್ ಆಗಿತ್ತು. ಬಳಿಕ ಪ್ರಕರಣ ಮಂಗಳೂರಿನ ಎಂಟನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮೆಟ್ಟಿಲೇರಿತ್ತು. ವಾದ- ವಿವಾದವನ್ನು ಆಲಿಸಿದ ನ್ಯಾಯಾಲಯ, ನಟಿ ಪದ್ಮಜಾ ರಾವ್ ಹಣ ನೀಡದೇ ವಂಚಿಸಿದ್ದಾರೆ. ಹಾಗಾಗಿ, 40.20 ಲಕ್ಷ ರೂ. ದಂಡ ಪಾವತಿಸುವಂತೆ ಪದ್ಮಜಾ ರಾವ್ ಅವರಿಗೆ ನ್ಯಾಯಾಲಯ ಆದೇಶಿಸಿದೆ.
ದಂಡದ ಮೊತ್ತದಲ್ಲಿ 40.17 ಲಕ್ಷ ರೂಪಾಯಿಯನ್ನು ದೂರುದಾರ ವೀರೇಂದ್ರ ಶೆಟ್ಟಿ ಅವರಿಗೆ ಹಾಗೂ ಉಳಿದ ಮೂರು ಸಾವಿರವನ್ನು ರಾಜ್ಯದ ಬೊಕ್ಕಸಕ್ಕೆ ತುಂಬಲು ನ್ಯಾಯಾಲಯ ಸೂಚಿಸಿದೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
The 8th JMFC Court of Mangaluru has sentenced actress Padmaja Rao to three months of simple imprisonment and has imposed a penalty of Rs 40.20 lakhs on her in a cheque bounce case.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm