ಬ್ರೇಕಿಂಗ್ ನ್ಯೂಸ್
27-08-24 09:37 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 27: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರು ನಗರದ 8ನೇ ಜೆಎಂಎಫ್ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ.
ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಎಂಬವರು ತಮ್ಮಿಂದ 41 ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು 2021ರಲ್ಲಿ ನಟಿ ಪದ್ಮಜಾ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಗೆ ಪದ್ಮಜಾ ರಾವ್ ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಲು ಬಂದ ಸಂದರ್ಭ ಪರಿಚಯವಾಗಿದ್ದರು. ಬಳಿಕ ವೀರೇಂದ್ರ ಶೆಟ್ಟಿಯವರ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಟಿ ಪದ್ಮಜಾ ಹಂತ ಹಂತವಾಗಿ 41 ಲಕ್ಷ ರೂ. ಸಾಲವನ್ನು ಪಡೆದಿದ್ದರು. ಸಾಲದ ಭದ್ರತೆಗೆ ಅವರು 40 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಪದ್ಮಜಾ ರಾವ್ ಮನೆಯಿಂದ ಚೆಕ್ ಕಳವು ಮಾಡಿ ಸಹಿಯನ್ನು ಪೋರ್ಜರಿ ಮಾಡಲಾಗಿದೆ ಎಂದು ಪದ್ಮಜಾ ರಾವ್ ಪರ ವಕೀಲರು ಕೋರ್ಟಿನಲ್ಲಿ ವಾದಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.
ಆದರೆ ಪದ್ಮಜಾ ರಾವ್ ಅವರು ಸಾಲ ಹಿಂತಿರುಗಿಸದ್ದರಿಂದ ವೀರೇಂದ್ರ ಅವರು ಚೆಕ್ ನಗದೀಕರಣಕ್ಕೆ ಮುಂದಾಗಿದ್ದು ಬ್ಯಾಂಕ್ನಲ್ಲಿ ಹಣವಿಲ್ಲದ್ದರಿಂದ ಚೆಕ್ ಬೌನ್ಸ್ ಆಗಿತ್ತು. ಬಳಿಕ ಪ್ರಕರಣ ಮಂಗಳೂರಿನ ಎಂಟನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮೆಟ್ಟಿಲೇರಿತ್ತು. ವಾದ- ವಿವಾದವನ್ನು ಆಲಿಸಿದ ನ್ಯಾಯಾಲಯ, ನಟಿ ಪದ್ಮಜಾ ರಾವ್ ಹಣ ನೀಡದೇ ವಂಚಿಸಿದ್ದಾರೆ. ಹಾಗಾಗಿ, 40.20 ಲಕ್ಷ ರೂ. ದಂಡ ಪಾವತಿಸುವಂತೆ ಪದ್ಮಜಾ ರಾವ್ ಅವರಿಗೆ ನ್ಯಾಯಾಲಯ ಆದೇಶಿಸಿದೆ.
ದಂಡದ ಮೊತ್ತದಲ್ಲಿ 40.17 ಲಕ್ಷ ರೂಪಾಯಿಯನ್ನು ದೂರುದಾರ ವೀರೇಂದ್ರ ಶೆಟ್ಟಿ ಅವರಿಗೆ ಹಾಗೂ ಉಳಿದ ಮೂರು ಸಾವಿರವನ್ನು ರಾಜ್ಯದ ಬೊಕ್ಕಸಕ್ಕೆ ತುಂಬಲು ನ್ಯಾಯಾಲಯ ಸೂಚಿಸಿದೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
The 8th JMFC Court of Mangaluru has sentenced actress Padmaja Rao to three months of simple imprisonment and has imposed a penalty of Rs 40.20 lakhs on her in a cheque bounce case.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm