ಬ್ರೇಕಿಂಗ್ ನ್ಯೂಸ್
28-08-24 05:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ದಿನೇಶ್ ಕುಡ್ತಮೊಗರು (20) ಮತ್ತು ಬೋಳಂತೂರು ನಿವಾಸಿ ಭರತ್ ಅಲಿಯಾಸ್ ಯಕ್ಷಿತ್ (24) ಬಂಧಿತ ಆರೋಪಿಗಳು. ಇಬ್ಬರೂ ಬಜರಂಗದಳ ಕಾರ್ಯಕರ್ತರೆಂದು ತಿಳಿದುಬಂದಿದೆ. ದಿನೇಶ್ ಚಾಲಕನಾಗಿ ಕೆಲಸ ಮಾಡುತ್ತಿದ್ದು ಈ ಹಿಂದೆ ಮೂರು ಹಲ್ಲೆ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಭರತ್ ಕನ್ಯಾನದಲ್ಲಿ ಫೈನಾನ್ಸ್ ಕಲೆಕ್ಷನ್ ಮಾಡುವ ಕೆಲಸ ಮಾಡುತ್ತಿದ್ದು ಈ ಹಿಂದೆ ಒಂದು ಪ್ರಕರಣ ಇದೆ. ಆರೋಪಿಗಳು ಮಂಗಳೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ, ಐವಾನ್ ವಿರುದ್ಧದ ಸಿಟ್ಟಿನಲ್ಲಿ ಕಲ್ಲು ಎಸೆದಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.
ಐವನ್ ಮನೆಯ ಪರಿಸರದ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾಗಿ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ರಾಜ್ಯಪಾಲರನ್ನು ಬಾಂಗ್ಲಾಕ್ಕೆ ಹೋಲಿಸಿ ಹೇಳಿಕೆ ನೀಡಿದ್ದಕ್ಕಾಗಿ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು. ಇದರ ನಡುವೆ, ಆಗಸ್ಟ್ 20 ರ ತಡರಾತ್ರಿ ಐವನ್ ಡಿಸೋಜಾ ಅವರ ಮಂಗಳೂರು ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಕಲ್ಲು ತೂರಾಟ ನಡೆದಿತ್ತು. ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಮನೆಯ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದರು ಎನ್ನಲಾಗಿತ್ತು. ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪಾಂಡೇಶ್ವರ ಠಾಣೆ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.
Stone pelting on Congress Ivan Dsouza house, two members of Bajrang dal arrested from bantwal. The accused have been identified as Bharat alias Yakshith (24) from Bolantoor Village, Bantwal Taluk and Dinesh Kurthamogeru (20) from Kolnadu Village, Bantwal Taluk.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm