ಬ್ರೇಕಿಂಗ್ ನ್ಯೂಸ್
28-08-24 06:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ರಾಜ್ಯಪಾಲರ ಬಗ್ಗೆ ಅವಹೇಳನ ಮಾಡಿದ ಎಂಎಲ್ಸಿ ಐವಾನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ನಗರದ ಪಿವಿಎಸ್ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ರಸ್ತೆಯಲ್ಲಿ ಕುಳಿತು ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದಕ್ಕಾಗಿ ಪೊಲೀಸರು ಸಂಸದ, ಶಾಸಕರು ಸೇರಿದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ಬಸ್ಸಿನಲ್ಲಿ ಉರ್ವಾ ಠಾಣೆಗೆ ಒಯ್ದಿದ್ದಾರೆ. ನೆಲದಲ್ಲಿ ಕುಳಿತಿದ್ದ ಕಾರ್ಯಕರ್ತರನ್ನು ಎತ್ತಿ ಬಸ್ಸಿಗೆ ತುಂಬಿಸಿದ್ದಾರೆ.








ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬ್ರಿಜೇಶ್ ಚೌಟ, ರಾಜ್ಯದಲ್ಲಿ ಕಳ್ಳರು ಸೇರಿಕೊಂಡು ರಾಜ್ಯಭಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಸ್ಥಿತಿ ಎಷ್ಟರಮಟ್ಟಿಗೆ ಹೋಗಿದೆ ಅಂದ್ರೆ ಕಳ್ಳರು ಕೂಡ ಪೊಲೀಸರ ಬಗ್ಗೆ ಮಾತಾಡುವ ಸ್ಥಿತಿಯಾಗಿದೆ. ರಾಜ್ಯಪಾಲರ ಅವಹೇಳನ ಮಾಡಿದ ಐವಾನ್ ಡಿಸೋಜ ವಿರುದ್ಧ ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದರೂ, ಸಿದ್ದರಾಮಯ್ಯ ರಾಜಿನಾಮೆ ನೀಡದೆ ಮೊಂಡು ವಾದ ಮುಂದಿಡುತ್ತಿದ್ದಾರೆ ಎಂದು ಹೇಳಿದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಐವಾನ್ ಡಿಸೋಜ ರಾಜ್ಯಪಾಲರಿಗೆ ಅಗೌರವ ತೋರುವ ಮೂಲಕ ಮಂಗಳೂರಿನ ಜನರನ್ನು ಅವಮಾನ ಮಾಡಿದ್ದಾರೆ. ನಾವು ಈಗಾಗಲೇ ಕಾನೂನು ಹೋರಾಟ ಎತ್ತಿಕೊಂಡಿದ್ದು ಕೋರ್ಟ್ ಸೂಚಿಸಿ ಕೇಸು ದಾಖಲಿಸಿಕೊಳ್ಳುವ ಬದಲು ಪೊಲೀಸರು ಕೇಸು ದಾಖಲಿಸಬೇಕು. ಆಡಳಿತ ಪಕ್ಷದ ಕೈಗೊಂಬೆ ರೀತಿ ವರ್ತಿಸಬಾರದು ಎಂದರು. ಪ್ರತಿಭಟನೆಯಲ್ಲಿ ಐವಾನ್ ಡಿಸೋಜ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.
Mangalore Bjp protest against Ivan Dsouza statment, BJP demands resignation of CM. The protest was held by Mlc Captian Brijesh Chowta and MLA Vedavyas Kamath, both were taken into custody by the police
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm