ಬ್ರೇಕಿಂಗ್ ನ್ಯೂಸ್
09-12-20 03:39 pm Mangalore Correspondent ಕರಾವಳಿ
ಉಳ್ಳಾಲ, ಡಿ, 9 : ತನ್ನ ಫರ್ನಿಚರ್ ವರ್ಕ್ ಶಾಪ್ ಗೆ ತಡೆಯಾಗುತ್ತಿದೆ ಎಂಬ ನೆಪ ಹೇಳಿ, ಹೆದ್ದಾರಿ ಅಂಚಿನಲ್ಲಿದ್ದ ಬೀದಿ ವ್ಯಾಪಾರಿಗಳ ಗೂಡಂಗಡಿಗಳನ್ನು ಮಾಜಿ ಕಾಂಗ್ರೆಸ್ ಸೇವಾದಳದ ನಾಯಕ ಅಶ್ರಫ್ ಪೊಲೀಸರಿಂದ ಕಿತ್ತು ತೆಗೆಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿಂದೆ ಕಾಂಗ್ರೆಸಿನ ಸೇವಾದಳದ ಜಿಲ್ಲಾ ನಾಯಕನಾಗಿದ್ದ ಅಶ್ರಪ್ ಅವರು ತೊಕ್ಕೊಟ್ಟು , ಅಂಬಿಕಾರೋಡ್ ಹೆದ್ದಾರಿ ಪಕ್ಕದಲ್ಲಿ ತನ್ನ ಫರ್ನಿಚರ್ ವರ್ಕ್ ಶಾಪ್ ಹೊಂದಿದ್ದಾರೆ. ಸ್ಥಳೀಯರ ಪ್ರಕಾರ ಈ ಫರ್ನಿಚರ್ ವರ್ಕ್ ಶಾಪ್ ಅಕ್ರಮ ಎಂದು ಹೇಳಲಾಗುತ್ತಿದೆ. ಅಶ್ರಫ್ ಮೇಲೆ ಅತ್ಯಾಚಾರದ ಆರೋಪ ಕೇಸ್ ಆದ ಮೇಲೆ ಅವರು ಕಾಂಗ್ರೆಸ್ ಪಕ್ಷದಿಂದ ಮೂಲೆಗುಂಪಾಗಿದ್ದರು. ಇವತ್ತು ಅಶ್ರಫ್, ತನ್ನ ಫರ್ನಿಚರ್ ವರ್ಕ್ ಶಾಪ್ ಮುಂದೆ ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನ ಏಕಾಏಕಿ ಪೊಲೀಸ್ ಬಲ ಪ್ರಯೋಗಿಸಿ ಎತ್ತಂಗಡಿ ಮಾಡಿಸಲು ಪ್ರಯತ್ನಿಸಿದ್ದಾರೆ.


ಅಲ್ಲದೆ ಉಳ್ಳಾಲ ನಗರಸಭೆ ಪೌರಾಯುಕ್ತರನ್ನು ಸ್ಥಳಕ್ಕೆ ಕರೆಯಿಸಿದ್ದಾರೆ. ಸ್ಥಳಕ್ಕೆ ಬಂದ ನಗರ ಪೌರಾಯುಕ್ತ ರಾಯಪ್ಪನವರೂ ಧನಿಕನ ಮಾತು ಕೇಳಿ ತನಗೆ ಸಂಬಂಧಿಸದ ಹೆದ್ದಾರಿ ಬದಿಯ ಬೀದಿ ವ್ಯಾಪಾರಿಗಳ ಗೂಡುಗಳನ್ನು ತೆರವುಗೊಳಸಿ ಅಮಾನವೀಯತೆ ಮೆರೆದಿದ್ದಾರೆ. ಹೆದ್ದಾರಿ ಅಂಚಿನ ವರೆಗೂ ಇರುವ ಜಾಗ ತನ್ನದೇ ಎಂದು ಬೀದಿ ಬದಿ ವ್ಯಾಪಾರಿಗಳಲ್ಲಿ ಅಶ್ರಫ್ ಹೇಳಿಕೊಂಡಿದ್ದಾರಂತೆ.


ಸ್ಥಳದಲ್ಲಿ ಸ್ಥಳೀಯ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟಾಗಿ ಪೊಲೀಸ್ ದೌರ್ಜನ್ಯವನ್ನು ವಿರೋಧಿಸಿದ್ದಾರೆ. ಬಡವರು ಹೆದ್ದಾರಿಯಲ್ಲಿ ಎಲ್ಲೆಡೆಯಲ್ಲೂ ಹೊಟ್ಟೆ ಹೊರೆಯಲು ಸಣ್ಣ ವ್ಯಾಪಾರ ನಡೆಸೋದು ಸಾಮಾನ್ಯ. ಆದರೆ ಓರ್ವ ಪ್ರಭಾವಿಯ ಮಾತು ಕೇಳಿ ಈ ರೀತಿ ಬಡವರ ಮೇಲೆ ಏಕಾಏಕಿ ಆಕ್ರಮಣ ಸರಿಯಲ್ಲವೆಂದು ಪೊಲೀಸರನ್ನು ತರಾಟೆಗೆ ತೆಗೆದಿದ್ದಾರೆ.
ಕಾಂಗ್ರೆಸ್ನ ದೀಪಕ್ ಪಿಲಾರ್, ಖಾದರ್ ಉಳ್ಳಾಲ್, ಬಿಜೆಪಿಯ ಚರಣ್ ಪೂಜಾರಿ, ನಾಗೇಶ್ ಕುಂಪಲ ಮೊದಲಾದವರು ಸ್ಥಳದಲ್ಲಿದ್ದು ಬಡ ಬೀದಿ ವ್ಯಾಪಾರಿಗಳ ಪರ ನಿಂತಿದ್ದಾರೆ.
Congress Member Ashraff from Thokottu mercilessly demolishes petty shops through police personal for the sake of his business activities.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am