ಬ್ರೇಕಿಂಗ್ ನ್ಯೂಸ್
01-09-24 07:11 pm Udupi Correspondent ಕರಾವಳಿ
ಉಡುಪಿ, ಸೆ 01: ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ರಿಷಬ್ ಶೆಟ್ಟಿ ಮತ್ತು ಜ್ಯೂ. ಎನ್ಟಿಆರ್ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.
ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಸ್ಟಾರ್ ನಟರು ದೇವರ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದರು.
ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ರಿಷಬ್ ಶೆಟ್ಟಿ ಮತ್ತು ಎನ್.ಟಿ.ಆರ್ ಮಂಗಳೂರು ಏರ್ಪೋರ್ಟ್ನಲ್ಲಿ ಭೇಟಿಯಾಗಿದ್ದರು ಮತ್ತು ಡಿವೈನ್ ಸ್ಟಾರ್, ಟೈಗರ್ನನ್ನು ಸ್ವಾಗತಿಸಿದ್ದರು.







ಸೆ.2ರಂದು ನನ್ನ ತಾಯಿ ಹುಟ್ಟುಹಬ್ಬ ಇದೆ. ಅವರ ತವರು ಕುಂದಾಪುರಕ್ಕೆ ಬರಬೇಕೆಂಬ ಮಹಾದಾಸೆ ಇತ್ತು. ಮಗನಾಗಿ ಅವರ ಸಣ್ಣ ಆಸೆಯನ್ನು ಈಡೇರಿಸುವುದೇ ನನ್ನ ಭಾಗ್ಯ. ಅವರ ಹುಟ್ಟುಹಬ್ಬಕ್ಕೆ ಇದೇ ದೊಡ್ಡ ಗಿಫ್ಟ್. ಅಮ್ಮನನ್ನು ಕರೆದುಕೊಂಡು ಬಂದಿದ್ದು ಖುಷಿ ಆಯಿತು. ಜತೆಗೆ ಆಸೆ ಈಡೇರಿಸಿ ಎಂಬ ನೆಮ್ಮದಿ ಇದೆ ಎಂದು ಟಾಲಿವುಡ್ ನಟ ಜ್ಯೂ.ಎನ್ಟಿಆರ್ ತಿಳಿಸಿದರು.
ಅಮ್ಮ ಯಾವಾಗಲೂ ಶ್ರೀಕೃಷ್ಣನ ದರ್ಶನಕ್ಕಾಗಿ ಅವರ ತವರು ಮನೆಯಾದ ಕುಂದಾಪುರದಿಂದ ಉಡುಪಿಗೆ ಹೋಗುವಂತೆ ನನ್ನನ್ನು ಒತ್ತಾಯಿಸುತ್ತಿದ್ದರು. ಈಗ ಅವರ ಕನಸು ನನಸಾಗಿದೆ. ಸೆಪ್ಟೆಂಬರ್ 2 ರಂದು ಅವರ ಹುಟ್ಟುಹಬ್ಬ. ಅದಕ್ಕೂ ಮುಂಚೆಯೇ ಈ ಬಾರಿ ಗಿಫ್ಟ್ ಇದಾಗಿರಲಿದೆ ಎಂದಿದ್ದಾರೆ. ನಿರ್ಮಾಪಕ (ಹೊಂಬಾಳೆ ಫಿಲಂಸ್ ಮುಖ್ಯಸ್ಥ) ವಿಜಯ್ ಕಿರಗಂದುರ್ ಸರ್ಗೆ ಧನ್ಯವಾದಗಳು. ನನ್ನ ಗೆಳೆಯ ಪ್ರಶಾಂತ್ ನೀಲ್ ಅವರೊಂದಿಗೆ ಇಲ್ಲಿಗೆ ಬಂದಿರುವ ಬಗ್ಗೆ ಸಂತೋಷವಿದೆ. ಅಲ್ಲದೇ ನಟ ರಿಷಬ್ ಶೆಟ್ಟಿ ಅವರೂ ಸಹ ನಮ್ಮೊಂದಿಗೆ ಬಂದು ಈ ಸಂತೋಷದ ಕ್ಷಣಗಳನ್ನು ಇನ್ನಷ್ಟು ಸ್ಪೆಷಲ್ ಮಾಡಿದ್ರು ಎಂದು ಹೇಳಿದ್ದಾರೆ.
ಇನ್ನು ಜ್ಯೂನಿಯರ್ ಎನ್ಟಿಆರ್ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆ ನಟ. ಸದ್ಯ ಅವರು ದೇವರ ಎನ್ನುವ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದ ನಾಯಕಿಯಾಗಿ ಜಾನ್ವಿ ಕಪೂರ್ ಅವರು ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 27 ರಂದು ಚಿತ್ರದ ಮೊದಲ ಭಾಗ ಭಾರತದಾದ್ಯಂತ ಬಿಡುಗಡೆ ಆಗಲಿದೆ.
Jr NTR and Rishab Shetty, along with filmmaker Prashanth Neel, were spotted in Mangaluru on Saturday. The trio, joined by Jr NTR’s family, visited a temple in Udupi to seek blessings.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm