ಬ್ರೇಕಿಂಗ್ ನ್ಯೂಸ್
01-09-24 07:11 pm Udupi Correspondent ಕರಾವಳಿ
ಉಡುಪಿ, ಸೆ 01: ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ರಿಷಬ್ ಶೆಟ್ಟಿ ಮತ್ತು ಜ್ಯೂ. ಎನ್ಟಿಆರ್ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.
ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಸ್ಟಾರ್ ನಟರು ದೇವರ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದರು.
ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ರಿಷಬ್ ಶೆಟ್ಟಿ ಮತ್ತು ಎನ್.ಟಿ.ಆರ್ ಮಂಗಳೂರು ಏರ್ಪೋರ್ಟ್ನಲ್ಲಿ ಭೇಟಿಯಾಗಿದ್ದರು ಮತ್ತು ಡಿವೈನ್ ಸ್ಟಾರ್, ಟೈಗರ್ನನ್ನು ಸ್ವಾಗತಿಸಿದ್ದರು.







ಸೆ.2ರಂದು ನನ್ನ ತಾಯಿ ಹುಟ್ಟುಹಬ್ಬ ಇದೆ. ಅವರ ತವರು ಕುಂದಾಪುರಕ್ಕೆ ಬರಬೇಕೆಂಬ ಮಹಾದಾಸೆ ಇತ್ತು. ಮಗನಾಗಿ ಅವರ ಸಣ್ಣ ಆಸೆಯನ್ನು ಈಡೇರಿಸುವುದೇ ನನ್ನ ಭಾಗ್ಯ. ಅವರ ಹುಟ್ಟುಹಬ್ಬಕ್ಕೆ ಇದೇ ದೊಡ್ಡ ಗಿಫ್ಟ್. ಅಮ್ಮನನ್ನು ಕರೆದುಕೊಂಡು ಬಂದಿದ್ದು ಖುಷಿ ಆಯಿತು. ಜತೆಗೆ ಆಸೆ ಈಡೇರಿಸಿ ಎಂಬ ನೆಮ್ಮದಿ ಇದೆ ಎಂದು ಟಾಲಿವುಡ್ ನಟ ಜ್ಯೂ.ಎನ್ಟಿಆರ್ ತಿಳಿಸಿದರು.
ಅಮ್ಮ ಯಾವಾಗಲೂ ಶ್ರೀಕೃಷ್ಣನ ದರ್ಶನಕ್ಕಾಗಿ ಅವರ ತವರು ಮನೆಯಾದ ಕುಂದಾಪುರದಿಂದ ಉಡುಪಿಗೆ ಹೋಗುವಂತೆ ನನ್ನನ್ನು ಒತ್ತಾಯಿಸುತ್ತಿದ್ದರು. ಈಗ ಅವರ ಕನಸು ನನಸಾಗಿದೆ. ಸೆಪ್ಟೆಂಬರ್ 2 ರಂದು ಅವರ ಹುಟ್ಟುಹಬ್ಬ. ಅದಕ್ಕೂ ಮುಂಚೆಯೇ ಈ ಬಾರಿ ಗಿಫ್ಟ್ ಇದಾಗಿರಲಿದೆ ಎಂದಿದ್ದಾರೆ. ನಿರ್ಮಾಪಕ (ಹೊಂಬಾಳೆ ಫಿಲಂಸ್ ಮುಖ್ಯಸ್ಥ) ವಿಜಯ್ ಕಿರಗಂದುರ್ ಸರ್ಗೆ ಧನ್ಯವಾದಗಳು. ನನ್ನ ಗೆಳೆಯ ಪ್ರಶಾಂತ್ ನೀಲ್ ಅವರೊಂದಿಗೆ ಇಲ್ಲಿಗೆ ಬಂದಿರುವ ಬಗ್ಗೆ ಸಂತೋಷವಿದೆ. ಅಲ್ಲದೇ ನಟ ರಿಷಬ್ ಶೆಟ್ಟಿ ಅವರೂ ಸಹ ನಮ್ಮೊಂದಿಗೆ ಬಂದು ಈ ಸಂತೋಷದ ಕ್ಷಣಗಳನ್ನು ಇನ್ನಷ್ಟು ಸ್ಪೆಷಲ್ ಮಾಡಿದ್ರು ಎಂದು ಹೇಳಿದ್ದಾರೆ.
ಇನ್ನು ಜ್ಯೂನಿಯರ್ ಎನ್ಟಿಆರ್ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆ ನಟ. ಸದ್ಯ ಅವರು ದೇವರ ಎನ್ನುವ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದ ನಾಯಕಿಯಾಗಿ ಜಾನ್ವಿ ಕಪೂರ್ ಅವರು ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 27 ರಂದು ಚಿತ್ರದ ಮೊದಲ ಭಾಗ ಭಾರತದಾದ್ಯಂತ ಬಿಡುಗಡೆ ಆಗಲಿದೆ.
Jr NTR and Rishab Shetty, along with filmmaker Prashanth Neel, were spotted in Mangaluru on Saturday. The trio, joined by Jr NTR’s family, visited a temple in Udupi to seek blessings.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm