ಬ್ರೇಕಿಂಗ್ ನ್ಯೂಸ್
02-09-24 09:20 pm Mangalore Correspondent ಕರಾವಳಿ
ಮಂಗಳೂರು, ಸೆ.2: ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಯಲ್ಲಿ 28 ಲಕ್ಷ ವೆಚ್ಚದ ಸಿಎಸ್.ಆರ್ ನಿಧಿ ಯೋಜನೆಯಡಿ
ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೂಲಂಕುಷವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಆದೇಶಿಸಿದ್ದಾರೆ.
ಪ್ರಕರಣ ಕುರಿತಂತೆ ಮಂಗಳೂರು ಜಿಲ್ಲಾ ಆಯುಷ್ ಅಧಿಕಾರಿ ಖುದ್ದು ಸಚಿವರನ್ನ ಭೇಟಿ ಮಾಡಿ ಉದ್ದೇಶಪೂರ್ವಕ ತನ್ನ ಮೇಲೆ ಆರೋಪ ಹೊರಿಸುತ್ತಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು. ಸಾಮಾಜಿಕ ಕಾರ್ಯಕರ್ತ ವಾಸುದೇವ್ ಹೊಳ್ಳ, ಜಿ.ಎಸ್.ಡಿ ಪಾಣಿ, ಕಿರಣ್ ಪೂಜಾರಿ ಎಂಬವರು ದುರುದ್ದೇಶ ಹೊಂದಿದ್ದು, ಆಯುಷ್ ಆಸ್ಪತ್ರೆಯ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದ್ದಾರೆ. ಅನಗತ್ಯ ದೂರುಗಳನ್ನ ಸಲ್ಲಿಸಿ ಅಡ್ಡಿಪಡಿಸುತ್ತಿದ್ದಾರೆ. ಸಿಎಸ್.ಆರ್ ಯೋಜನೆಯ ಮೂಲಕ ಹಣವನ್ನ ತಂದು ಆಯುಷ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ಶ್ರಮ ವಹಿಸಲಾಗಿತ್ತು. ಆದರೆ ಈ ಮೂವರು ತಮ್ಮ ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಗಾಗಿ ಸರ್ಕಾರಿ ಕಾರ್ಯಕ್ಕೆ ಅಡ್ಡಿಯುಂಟುಮಾಡಿದ್ದಾರೆ ಎಂದು ದೂರಿದ್ದರು.
ಇನ್ನೊಂದಡೆ ಈ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವು ಕೇಳಿಬಂದಿತ್ತು. ಆರೋಪ ಪ್ರತ್ಯಾರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣದ ಕೂಲಂಕುಷ ತನಿಖೆಗೆ ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಆರೋಪದಲ್ಲಿ ಸತ್ಯಾಸತ್ಯತೆ ಇದೆಯೇ ಅಥವಾ ಉದ್ದೇಶಪೂರ್ವಕವಾಗಿ ದೂರು ಸಲ್ಲಿಸಲಾಗಿದೆಯೇ ಎಂಬುದರ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಆಯುಷ್ ಅಧಿಕಾರಿಗಳು ತಪ್ಪು ಎಸಗಿದ್ದರೆ ಸೂಕ್ತ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿ. ಒಂದು ವೇಳೆ ಆಯುಷ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪಗಳನ್ನ ಮಾಡಿದ್ದಾರೆ ಎಂದು ಕಂಡುಬಂದರೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಆದೇಶದಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಸೂಚಿಸಿದ್ದಾರೆ.
Mangalore Ayush instrument scam, Health minister orders probe.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm