ಬ್ರೇಕಿಂಗ್ ನ್ಯೂಸ್
02-09-24 09:20 pm Mangalore Correspondent ಕರಾವಳಿ
ಮಂಗಳೂರು, ಸೆ.2: ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಯಲ್ಲಿ 28 ಲಕ್ಷ ವೆಚ್ಚದ ಸಿಎಸ್.ಆರ್ ನಿಧಿ ಯೋಜನೆಯಡಿ
ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೂಲಂಕುಷವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಆದೇಶಿಸಿದ್ದಾರೆ.
ಪ್ರಕರಣ ಕುರಿತಂತೆ ಮಂಗಳೂರು ಜಿಲ್ಲಾ ಆಯುಷ್ ಅಧಿಕಾರಿ ಖುದ್ದು ಸಚಿವರನ್ನ ಭೇಟಿ ಮಾಡಿ ಉದ್ದೇಶಪೂರ್ವಕ ತನ್ನ ಮೇಲೆ ಆರೋಪ ಹೊರಿಸುತ್ತಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು. ಸಾಮಾಜಿಕ ಕಾರ್ಯಕರ್ತ ವಾಸುದೇವ್ ಹೊಳ್ಳ, ಜಿ.ಎಸ್.ಡಿ ಪಾಣಿ, ಕಿರಣ್ ಪೂಜಾರಿ ಎಂಬವರು ದುರುದ್ದೇಶ ಹೊಂದಿದ್ದು, ಆಯುಷ್ ಆಸ್ಪತ್ರೆಯ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದ್ದಾರೆ. ಅನಗತ್ಯ ದೂರುಗಳನ್ನ ಸಲ್ಲಿಸಿ ಅಡ್ಡಿಪಡಿಸುತ್ತಿದ್ದಾರೆ. ಸಿಎಸ್.ಆರ್ ಯೋಜನೆಯ ಮೂಲಕ ಹಣವನ್ನ ತಂದು ಆಯುಷ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ಶ್ರಮ ವಹಿಸಲಾಗಿತ್ತು. ಆದರೆ ಈ ಮೂವರು ತಮ್ಮ ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಗಾಗಿ ಸರ್ಕಾರಿ ಕಾರ್ಯಕ್ಕೆ ಅಡ್ಡಿಯುಂಟುಮಾಡಿದ್ದಾರೆ ಎಂದು ದೂರಿದ್ದರು.
ಇನ್ನೊಂದಡೆ ಈ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವು ಕೇಳಿಬಂದಿತ್ತು. ಆರೋಪ ಪ್ರತ್ಯಾರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣದ ಕೂಲಂಕುಷ ತನಿಖೆಗೆ ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಆರೋಪದಲ್ಲಿ ಸತ್ಯಾಸತ್ಯತೆ ಇದೆಯೇ ಅಥವಾ ಉದ್ದೇಶಪೂರ್ವಕವಾಗಿ ದೂರು ಸಲ್ಲಿಸಲಾಗಿದೆಯೇ ಎಂಬುದರ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಆಯುಷ್ ಅಧಿಕಾರಿಗಳು ತಪ್ಪು ಎಸಗಿದ್ದರೆ ಸೂಕ್ತ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿ. ಒಂದು ವೇಳೆ ಆಯುಷ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪಗಳನ್ನ ಮಾಡಿದ್ದಾರೆ ಎಂದು ಕಂಡುಬಂದರೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಆದೇಶದಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಸೂಚಿಸಿದ್ದಾರೆ.
Mangalore Ayush instrument scam, Health minister orders probe.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am