ಬ್ರೇಕಿಂಗ್ ನ್ಯೂಸ್
03-09-24 09:00 pm Mangalore Correspondent ಕರಾವಳಿ
ಮಂಗಳೂರು, ಸೆ.3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾ.ಚೌಟ ಅವರು, ಕೇಂದ್ರ ಸರ್ಕಾರವು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ(CRIF) ಅಡಿ ಈ ಅನುದಾನ ನೀಡಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 74.30 ಕಿಲೋ ಮೀಟರ್ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಈ ಎಲ್ಲಾ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ 42 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಇದೇ ವೇಳೆ ತಿಳಿಸಿದ್ದಾರೆ.
ಯಾವೆಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಂಗಳೂರು ತಾಲೂಕು ವ್ಯಾಪ್ತಿಯ ಮಾಣಿ-ಉಳ್ಳಾಲ ರಾಜ್ಯ ಹೆದ್ದಾರಿಯಲ್ಲಿ 5.7 ಕಿ.ಮೀ ರಸ್ತೆ ನವೀಕರಣಕ್ಕೆ 3.42 ಕೋ.ರೂ., ಉಚ್ಚಿಲ- ದೇರಳಕಟ್ಟೆ ಜಿಲ್ಲಾ ರಸ್ತೆಯ 1 ಕಿ.ಮೀ. ನವೀಕರಣಕ್ಕೆ 60 ಲಕ್ಷ ರೂ., ಪೆರ್ಮನ್ನೂರು- ಪಾವೂರು ರಸ್ತೆ 1.1 ಕಿ.ಮೀ. ನವೀಕರಣಕ್ಕೆ 66 ಲಕ್ಷ ರೂ.,
ಕೋಟೆಕಾರು - ಪಾತೂರು 2.2 ಕಿ.ಮೀ ರಸ್ತೆಗೆ 1.32 ಕೋ.ರೂ ರಾಜ್ಯ ಹೆದ್ದಾರಿ 64ರ ಕಡೂರು- ಕಾಞಂಗಾಡ್ 2.25 ಕಿ.ಮೀ. ರಸ್ತೆಗೆ 1.35 ಕೋ.ರೂ., ಬಂಟ್ವಾಳ ವ್ಯಾಪ್ತಿಯಲ್ಲಿ ಸುರತ್ಕಲ್ -ಕಬಕ 3.33 ಕಿ.ಮೀ. ರಸ್ತೆ ಕಾಮಗಾರಿಗೆ 2 ಕೋ.ರೂ., ಪಾಣೆಮಂಗಳೂರು- ಪಾತೂರು 3.2 ಕಿ.ಮೀ ರಸ್ತೆಗೆ 1.92 ಕೋ.ರೂ., ಮಾರಿಪಳ್ಳ-ಕಲ್ಪನೆ 1.22 ಕಿ.ಮೀ. ರಸ್ತೆಗೆ 73 ಲ.ರೂ., ನಿಂತಿಕಲ್ಲು-ಬೆಳ್ಳಾರೆ- ನೆಟ್ಟಾರು 6.2 ಕಿ.ಮೀ. ರಸ್ತೆ ಮೇಲ್ದರ್ಜೆಗೇರಿಸಲು 3.72 ಕೋ.ರೂ., ಸುಳ್ಯ- ಪೈಚಾರು-ಬೆಳ್ಳಾರೆ 3.8 ಕಿಮೀ ರಸ್ತೆ ಮೇಲ್ದರ್ಜೆಗೇರಿಸಲು 2.28 ಕೋ.ರೂ. ಬಿಡುಗಡೆಯಾಗಿದೆ.
ರಾಜ್ಯ ಹೆದ್ದಾರಿ ಸುಬ್ರಹ್ಮಣ್ಯ- ಮಂಜೇಶ್ವರದ 5.2 ಕಿಮೀ ರಸ್ತೆಗೆ 3.12 ಕೋ.ರೂ., ಪುತ್ತೂರು ತಾಲೂಕಿನ ನಿಂತಿಕಲ್ಲು- ಬೆಳ್ಳಾರೆ-ನೆಟ್ಟಾರು-ಅಮ್ಚಿನಡ್ಕ- ಕಾವು-ಈಶ್ವರಮಂಗಲ- ಪಲ್ಲತ್ತಾರು ರಾಜ್ಯ ಹೆದ್ದಾರಿಯಿಂದ ಜಿಲ್ಲಾ ರಸ್ತೆಗೆ ಸಂಪರ್ಕದ 4.8 ಕಿ.ಮೀ ರಸ್ತೆ ಕಾಮಗಾರಿಗೆ 2.88 ಕೋ.ರೂ., ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ -ಉಪ್ಪಿನಂಗಡಿ 10 ಕಿಮೀ ರಸ್ತೆ ಕಾಮಗಾರಿಗಳಿಗೆ 6 ಕೋ.ರೂ., ಮಂಗಳೂರು ತಾಲೂಕಿನ ಪುನರೂರು- ಶಾಂತಿಪಲ್ಕೆ- ದಾಮಸ್ಕಟ್ಟೆಯ 11.7 ಕಿ.ಮೀ. ರಸ್ತೆ ನವೀಕರಣಕ್ಕೆ 6 ಕೋ.ರೂ., ಮಂಗಳೂರು ತಾಲೂಕಿನ ಭಟ್ರಕೆರೆ- ಕತ್ತಲ್ಸಾರ್ -ಕುಕ್ಕುದಕಟ್ಟೆ- ನೀರ್ಕೆರೆ- ತೋಡಾರು -ಮಾಸ್ತಿಕಟ್ಟೆ 6.1 ಕಿ.ಮೀ. ಜಿಲ್ಲಾ ರಸ್ತೆಗೆ 3 ಕೋ.ರೂ., ಸಂಪಿಗೆ- ಅಶ್ವಥಪುರ -ನೀರ್ಕೆರೆ - ಮಿಜಾರು 6.5ಕಿ.ಮೀ. ಜಿಲ್ಲಾ ರಸ್ತೆ ಅಭಿವೃದ್ದಿಗೆ 3 ಕೋ.ರೂ. ಬಿಡುಗಡೆ ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore MP Captian Brijesh Chowta Releases rs 42 crores for road development.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm