ಬ್ರೇಕಿಂಗ್ ನ್ಯೂಸ್
05-09-24 05:22 pm Mangalore Correspondent ಕರಾವಳಿ
ಮಂಗಳೂರು, ಸೆ.5: ಮಂಗಳೂರು - ಉಡುಪಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಐಷಾರಾಮಿ ಕಾರು ಹಠಾತ್ತನೇ ಬೆಂಕಿ ಹತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಕುಂದಾಪುರದ ದಯಾನಂದ ಶೆಟ್ಟಿ ಎಂಬವರ ಕಾರು ಇದಾಗಿದ್ದು ಅವರೇ ಉಡುಪಿಯಿಂದ ಮಂಗಳೂರಿಗೆ ಚಲಾಯಿಸುತ್ತ ಬರುತ್ತಿದ್ದಾಗ ಇಂಜಿನ್ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ಹೀಗಾಗಿ ಕಾರನ್ನು ಎನ್ಐಟಿಕೆ ಎದುರಿನ ರಸ್ತೆಯಲ್ಲೇ ನಿಲ್ಲಿಸಿ ಹೊರಕ್ಕೆ ಇಳಿದಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಉಡುಪಿಯಿಂದ ವೇಗವಾಗಿ ಮಂಗಳೂರು ಕಡೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ನೋಡ ನೋಡುತ್ತಲೇ ಬೆಂಕಿಯ ಜ್ವಾಲೆ ಮೇಲೇರಿದ್ದು ಪ್ಲಾಸ್ಟಿಕ್ ಆಟಿಕೆಯಂತೆ ಕಾರು ಉರಿದಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳದಲ್ಲಿ ವಾಹನ ಸಂಚಾರ ಬಂದ್ ಮಾಡಿ, ಜನರನ್ನು ಕೂಡ ದೂರ ನಿಲ್ಲಿಸಲಾಯಿತು. ಕಾರು ಸ್ಫೋಟಗೊಂಡ ರೀತಿ ಬೆಂಕಿ ಹತ್ತಿಕೊಂಡಿದ್ದು ಜನರು ನೋಡುತ್ತಲೇ ಮರುಗಿದ್ದಾರೆ. ಐಷಾರಾಮಿ ಕಾರು ಬೆಂಕಿಯಲ್ಲಿ ಲೀನವಾಗಿದ್ದನ್ನು ದಿಗ್ಭ್ರಾಂತಿಯಿಂದ ಕಾರಿನ ಮಾಲೀಕ ರಸ್ತೆಯಲ್ಲಿ ನಿಂತು ನೋಡುವಂತಾಗಿತ್ತು.



ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆ ಪೊಲಿಸರು, ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಡೀಸೆಲ್ ಬಳಸುತ್ತಿದ್ದ ಬಿಎಂಡಬ್ಲ್ಯು ಕಾರು ಇದಾಗಿದ್ದು ನಡುರಸ್ತೆಯಲ್ಲಿ ಈ ರೀತಿ ಉರಿದು ಹೋಗಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ. ಕಾರಿಗೆ ಬೆಂಕಿ ಹತ್ತಿಕೊಳ್ಳಲು ಕಾರಣವಾದ ಅಂಶ ಏನೆಂದು ಬಿಎಂಡಬ್ಲ್ಯು ಕಂಪನಿಯವರೇ ಹೇಳಬೇಕು. ಮೊದಲಿಗೆ, ಇಲೆಕ್ಟ್ರಿಕ್ ಕಾರು ಎಂದು ಹೇಳಲಾಗಿತ್ತು. ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಡೀಸೆಲ್ ಕಾರು ಎಂದು ಖಚಿತಪಡಿಸಿದ್ದಾರೆ.
#Mangalore #BMW car catches #fire near #surathkal toll, video goes viral. The car was travelling towards #Udupi and belongs to Dayanand Shetty from Kundapura. Suddenly the car caught fire near #NITKtoll gate #bmwcarfire #mangalorenews pic.twitter.com/ArDrx4m92r
— Headline Karnataka (@hknewsonline) September 5, 2024
Mangalore BMW car catches fire near surathkal toll, videos goes viral. The car was travelling towards Udupi and belongs to Dayanand Shetty from Kundapura. Suddenly the car caught fire near NITK toll gate.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm