ಬ್ರೇಕಿಂಗ್ ನ್ಯೂಸ್
05-09-24 05:22 pm Mangalore Correspondent ಕರಾವಳಿ
ಮಂಗಳೂರು, ಸೆ.5: ಮಂಗಳೂರು - ಉಡುಪಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಐಷಾರಾಮಿ ಕಾರು ಹಠಾತ್ತನೇ ಬೆಂಕಿ ಹತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಕುಂದಾಪುರದ ದಯಾನಂದ ಶೆಟ್ಟಿ ಎಂಬವರ ಕಾರು ಇದಾಗಿದ್ದು ಅವರೇ ಉಡುಪಿಯಿಂದ ಮಂಗಳೂರಿಗೆ ಚಲಾಯಿಸುತ್ತ ಬರುತ್ತಿದ್ದಾಗ ಇಂಜಿನ್ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ಹೀಗಾಗಿ ಕಾರನ್ನು ಎನ್ಐಟಿಕೆ ಎದುರಿನ ರಸ್ತೆಯಲ್ಲೇ ನಿಲ್ಲಿಸಿ ಹೊರಕ್ಕೆ ಇಳಿದಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಉಡುಪಿಯಿಂದ ವೇಗವಾಗಿ ಮಂಗಳೂರು ಕಡೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ನೋಡ ನೋಡುತ್ತಲೇ ಬೆಂಕಿಯ ಜ್ವಾಲೆ ಮೇಲೇರಿದ್ದು ಪ್ಲಾಸ್ಟಿಕ್ ಆಟಿಕೆಯಂತೆ ಕಾರು ಉರಿದಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳದಲ್ಲಿ ವಾಹನ ಸಂಚಾರ ಬಂದ್ ಮಾಡಿ, ಜನರನ್ನು ಕೂಡ ದೂರ ನಿಲ್ಲಿಸಲಾಯಿತು. ಕಾರು ಸ್ಫೋಟಗೊಂಡ ರೀತಿ ಬೆಂಕಿ ಹತ್ತಿಕೊಂಡಿದ್ದು ಜನರು ನೋಡುತ್ತಲೇ ಮರುಗಿದ್ದಾರೆ. ಐಷಾರಾಮಿ ಕಾರು ಬೆಂಕಿಯಲ್ಲಿ ಲೀನವಾಗಿದ್ದನ್ನು ದಿಗ್ಭ್ರಾಂತಿಯಿಂದ ಕಾರಿನ ಮಾಲೀಕ ರಸ್ತೆಯಲ್ಲಿ ನಿಂತು ನೋಡುವಂತಾಗಿತ್ತು.



ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆ ಪೊಲಿಸರು, ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಡೀಸೆಲ್ ಬಳಸುತ್ತಿದ್ದ ಬಿಎಂಡಬ್ಲ್ಯು ಕಾರು ಇದಾಗಿದ್ದು ನಡುರಸ್ತೆಯಲ್ಲಿ ಈ ರೀತಿ ಉರಿದು ಹೋಗಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ. ಕಾರಿಗೆ ಬೆಂಕಿ ಹತ್ತಿಕೊಳ್ಳಲು ಕಾರಣವಾದ ಅಂಶ ಏನೆಂದು ಬಿಎಂಡಬ್ಲ್ಯು ಕಂಪನಿಯವರೇ ಹೇಳಬೇಕು. ಮೊದಲಿಗೆ, ಇಲೆಕ್ಟ್ರಿಕ್ ಕಾರು ಎಂದು ಹೇಳಲಾಗಿತ್ತು. ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಡೀಸೆಲ್ ಕಾರು ಎಂದು ಖಚಿತಪಡಿಸಿದ್ದಾರೆ.
#Mangalore #BMW car catches #fire near #surathkal toll, video goes viral. The car was travelling towards #Udupi and belongs to Dayanand Shetty from Kundapura. Suddenly the car caught fire near #NITKtoll gate #bmwcarfire #mangalorenews pic.twitter.com/ArDrx4m92r
— Headline Karnataka (@hknewsonline) September 5, 2024
Mangalore BMW car catches fire near surathkal toll, videos goes viral. The car was travelling towards Udupi and belongs to Dayanand Shetty from Kundapura. Suddenly the car caught fire near NITK toll gate.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm