ಬ್ರೇಕಿಂಗ್ ನ್ಯೂಸ್
05-09-24 05:22 pm Mangalore Correspondent ಕರಾವಳಿ
ಮಂಗಳೂರು, ಸೆ.5: ಮಂಗಳೂರು - ಉಡುಪಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಐಷಾರಾಮಿ ಕಾರು ಹಠಾತ್ತನೇ ಬೆಂಕಿ ಹತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಕುಂದಾಪುರದ ದಯಾನಂದ ಶೆಟ್ಟಿ ಎಂಬವರ ಕಾರು ಇದಾಗಿದ್ದು ಅವರೇ ಉಡುಪಿಯಿಂದ ಮಂಗಳೂರಿಗೆ ಚಲಾಯಿಸುತ್ತ ಬರುತ್ತಿದ್ದಾಗ ಇಂಜಿನ್ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ಹೀಗಾಗಿ ಕಾರನ್ನು ಎನ್ಐಟಿಕೆ ಎದುರಿನ ರಸ್ತೆಯಲ್ಲೇ ನಿಲ್ಲಿಸಿ ಹೊರಕ್ಕೆ ಇಳಿದಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಉಡುಪಿಯಿಂದ ವೇಗವಾಗಿ ಮಂಗಳೂರು ಕಡೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ನೋಡ ನೋಡುತ್ತಲೇ ಬೆಂಕಿಯ ಜ್ವಾಲೆ ಮೇಲೇರಿದ್ದು ಪ್ಲಾಸ್ಟಿಕ್ ಆಟಿಕೆಯಂತೆ ಕಾರು ಉರಿದಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳದಲ್ಲಿ ವಾಹನ ಸಂಚಾರ ಬಂದ್ ಮಾಡಿ, ಜನರನ್ನು ಕೂಡ ದೂರ ನಿಲ್ಲಿಸಲಾಯಿತು. ಕಾರು ಸ್ಫೋಟಗೊಂಡ ರೀತಿ ಬೆಂಕಿ ಹತ್ತಿಕೊಂಡಿದ್ದು ಜನರು ನೋಡುತ್ತಲೇ ಮರುಗಿದ್ದಾರೆ. ಐಷಾರಾಮಿ ಕಾರು ಬೆಂಕಿಯಲ್ಲಿ ಲೀನವಾಗಿದ್ದನ್ನು ದಿಗ್ಭ್ರಾಂತಿಯಿಂದ ಕಾರಿನ ಮಾಲೀಕ ರಸ್ತೆಯಲ್ಲಿ ನಿಂತು ನೋಡುವಂತಾಗಿತ್ತು.



ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆ ಪೊಲಿಸರು, ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಡೀಸೆಲ್ ಬಳಸುತ್ತಿದ್ದ ಬಿಎಂಡಬ್ಲ್ಯು ಕಾರು ಇದಾಗಿದ್ದು ನಡುರಸ್ತೆಯಲ್ಲಿ ಈ ರೀತಿ ಉರಿದು ಹೋಗಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ. ಕಾರಿಗೆ ಬೆಂಕಿ ಹತ್ತಿಕೊಳ್ಳಲು ಕಾರಣವಾದ ಅಂಶ ಏನೆಂದು ಬಿಎಂಡಬ್ಲ್ಯು ಕಂಪನಿಯವರೇ ಹೇಳಬೇಕು. ಮೊದಲಿಗೆ, ಇಲೆಕ್ಟ್ರಿಕ್ ಕಾರು ಎಂದು ಹೇಳಲಾಗಿತ್ತು. ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಡೀಸೆಲ್ ಕಾರು ಎಂದು ಖಚಿತಪಡಿಸಿದ್ದಾರೆ.
#Mangalore #BMW car catches #fire near #surathkal toll, video goes viral. The car was travelling towards #Udupi and belongs to Dayanand Shetty from Kundapura. Suddenly the car caught fire near #NITKtoll gate #bmwcarfire #mangalorenews pic.twitter.com/ArDrx4m92r
— Headline Karnataka (@hknewsonline) September 5, 2024
Mangalore BMW car catches fire near surathkal toll, videos goes viral. The car was travelling towards Udupi and belongs to Dayanand Shetty from Kundapura. Suddenly the car caught fire near NITK toll gate.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm