ಬ್ರೇಕಿಂಗ್ ನ್ಯೂಸ್
06-09-24 10:28 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು, ಬೆಂಗಳೂರು, ಮೈಸೂರು ನಗರದಲ್ಲಿ ವಾತಾವರಣದ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ಗ್ರೀನ್ ಪೀಸ್ ಸಂಶೋಧನಾ ವರದಿ ನೀಡಿದೆ. ಕರ್ನಾಟಕದ ಬೆಂಗಳೂರು, ಮೈಸೂರು ಹಾಗು ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಮಾಲಿನ್ಯ ತಗ್ಗಿಸಲು ಕ್ರಮ ಕೈಗೊಳ್ಳದಿದ್ದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದೆ.
ದಕ್ಷಿಣ ಭಾರತದ 10 ಪ್ರಮುಖ ನಗರಗಳ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳಾದ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ) ಕಣಗಳ ಪ್ರಮಾಣವು ಡಬ್ಲ್ಯುಎಚ್ಒ ಸೂಚಿತ ಸರಾಸರಿ ಮಟ್ಟ ಮೀರಿದ್ದು ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಗ್ರೀನ್ಪೀಸ್ ಇಂಡಿಯಾದ ವರದಿ ಎಚ್ಚರಿಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಲಾಗಿತ್ತು. ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂ ನಗರದಲ್ಲಿ ಗಾಳಿ ಗುಣಮಟ್ಟ ತೀವ್ರ ಕುಸಿತ ಕಂಡಿದೆ. ಅಲ್ಲಿನ ವಾತಾವರಣ ನಿಗದಿತ ಮಾನದಂಡಕ್ಕಿಂತ ಗುಣಮಟ್ಟದ ಅಂಶ 10 ಪಟ್ಟು ಕುಸಿದಿರುವುದು ದೃಢಪಟ್ಟಿದೆ.
ಅಲ್ಲದೆ ಇದು ಗಾಳಿಯ ಗುಣಮಟ್ಟ ನಿರ್ಧರಿಸುವ ನ್ಯಾಶನಲ್ ಎಂಬಿಯಂಟ್ ಏರ್ ಕ್ವಾಲಿಟಿ ಸ್ಟಾಂಡರ್ಡ್ ನಿಗದಿಪಡಿಸಿದ ಮಿತಿಗಳನ್ನೂ ಮೀರಿದೆ ಎಂದು ಅಧ್ಯಯನವು ಸ್ಪಷ್ಟಪಡಿಸಿದೆ. ಡಬ್ಲ್ಯುಎಚ್ಒ ಮಾರ್ಗಸೂಚಿಗಳೊಂದಿಗೆ ಹೋಲಿಸಿದಾಗ, ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ 6ರಿಂದ 7 ಪಟ್ಟು ಹೆಚ್ಚಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಾಗಿದೆ ಎಂಬುದಾಗಿ ವರದಿ ಹೇಳಿದೆ.
Greenpeace India warns of bad air quality in Mangalore Bangalore and Mysuru.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm