ಬ್ರೇಕಿಂಗ್ ನ್ಯೂಸ್
06-09-24 10:28 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು, ಬೆಂಗಳೂರು, ಮೈಸೂರು ನಗರದಲ್ಲಿ ವಾತಾವರಣದ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ಗ್ರೀನ್ ಪೀಸ್ ಸಂಶೋಧನಾ ವರದಿ ನೀಡಿದೆ. ಕರ್ನಾಟಕದ ಬೆಂಗಳೂರು, ಮೈಸೂರು ಹಾಗು ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಮಾಲಿನ್ಯ ತಗ್ಗಿಸಲು ಕ್ರಮ ಕೈಗೊಳ್ಳದಿದ್ದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದೆ.
ದಕ್ಷಿಣ ಭಾರತದ 10 ಪ್ರಮುಖ ನಗರಗಳ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳಾದ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ) ಕಣಗಳ ಪ್ರಮಾಣವು ಡಬ್ಲ್ಯುಎಚ್ಒ ಸೂಚಿತ ಸರಾಸರಿ ಮಟ್ಟ ಮೀರಿದ್ದು ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಗ್ರೀನ್ಪೀಸ್ ಇಂಡಿಯಾದ ವರದಿ ಎಚ್ಚರಿಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಲಾಗಿತ್ತು. ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂ ನಗರದಲ್ಲಿ ಗಾಳಿ ಗುಣಮಟ್ಟ ತೀವ್ರ ಕುಸಿತ ಕಂಡಿದೆ. ಅಲ್ಲಿನ ವಾತಾವರಣ ನಿಗದಿತ ಮಾನದಂಡಕ್ಕಿಂತ ಗುಣಮಟ್ಟದ ಅಂಶ 10 ಪಟ್ಟು ಕುಸಿದಿರುವುದು ದೃಢಪಟ್ಟಿದೆ.
ಅಲ್ಲದೆ ಇದು ಗಾಳಿಯ ಗುಣಮಟ್ಟ ನಿರ್ಧರಿಸುವ ನ್ಯಾಶನಲ್ ಎಂಬಿಯಂಟ್ ಏರ್ ಕ್ವಾಲಿಟಿ ಸ್ಟಾಂಡರ್ಡ್ ನಿಗದಿಪಡಿಸಿದ ಮಿತಿಗಳನ್ನೂ ಮೀರಿದೆ ಎಂದು ಅಧ್ಯಯನವು ಸ್ಪಷ್ಟಪಡಿಸಿದೆ. ಡಬ್ಲ್ಯುಎಚ್ಒ ಮಾರ್ಗಸೂಚಿಗಳೊಂದಿಗೆ ಹೋಲಿಸಿದಾಗ, ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ 6ರಿಂದ 7 ಪಟ್ಟು ಹೆಚ್ಚಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಾಗಿದೆ ಎಂಬುದಾಗಿ ವರದಿ ಹೇಳಿದೆ.
Greenpeace India warns of bad air quality in Mangalore Bangalore and Mysuru.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm