ಬ್ರೇಕಿಂಗ್ ನ್ಯೂಸ್
10-09-24 07:41 pm Mangalore Correspondent ಕರಾವಳಿ
ಪುತ್ತೂರು, ಸೆ.10: ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಎಫ್.ಐ.ಆರ್ ಮತ್ತು ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
14 ತಿಂಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ 47ರ ಹರೆಯದ ಮಹಿಳೆಯೋರ್ವರು ನೀಡಿದ ದೂರಿನಂತೆ ವಾರದ ಹಿಂದೆ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಸುಳ್ಳು ಆರೋಪ ಹೊರಿಸಲಾಗಿದೆ. 47 ವರ್ಷದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ, ಅತ್ಯಾಚಾರ ಎಸಗಲಾಗಿದೆ ಎಂದು ಸುಳ್ಳು ದೂರು ನೀಡಿರುವುದಾಗಿ ವಾದಿಸಿದರು.
ಅರುಣ್ ಪುತ್ತಿಲ ಅವರೊಂದಿಗೆ ಮಹಿಳೆ ಮಾತನಾಡಿದ ಆಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು. ಇದರ ಬಳಿಕ ಪುತ್ತಿಲ, ಬೆಂಗಳೂರಿನ ಸಿಟಿ ನ್ಯಾಯಾಲಯದಲ್ಲಿ ಮಾನಹಾನಿಯಾಗುವ ವರದಿಗಳನ್ನು ಪ್ರಸಾರಿಸದಂತೆ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದರು. ಆನಂತರ, ಮಹಿಳೆ ಠಾಣೆಗೆ ತೆರಳಿ ದೂರು ನೀಡಿದ್ದು, ಇದೊಂದು ಸುಳ್ಳು ಆರೋಪವಾಗಿದೆ. ಪುತ್ತಿಲರ ರಾಜಕೀಯ ವಿರೋಧಿಗಳು ಈ ಕೃತ್ಯದ ಹಿಂದಿದ್ದಾರೆ ಎಂದು ಪಿ.ಪಿ.ಹೆಗ್ಡೆ ನ್ಯಾಯಪೀಠದ ಗಮನ ಸೆಳೆದಿದ್ದರು.
ಈ ಕುರಿತು ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ಪುತ್ತಿಲ ಪರ ವಕೀಲರು ಕೋರಿದ್ದು ಇದನ್ನು ಮಾನ್ಯ ಮಾಡಿ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
High court holds Arun puthila sexual harassment case, lawyer argues as fake case. Puttila Parivara founder and BJP leader Arun Kumar Puthila obtained bail from a Magistrate Court in Puttur on Monday, September 2, in connection with a case of sexual harassment registered against him by the Dakshina Kannada Women Police in Puttur on Sunday, September 1.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm