ಬ್ರೇಕಿಂಗ್ ನ್ಯೂಸ್
10-09-24 07:41 pm Mangalore Correspondent ಕರಾವಳಿ
ಪುತ್ತೂರು, ಸೆ.10: ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಎಫ್.ಐ.ಆರ್ ಮತ್ತು ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
14 ತಿಂಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ 47ರ ಹರೆಯದ ಮಹಿಳೆಯೋರ್ವರು ನೀಡಿದ ದೂರಿನಂತೆ ವಾರದ ಹಿಂದೆ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಸುಳ್ಳು ಆರೋಪ ಹೊರಿಸಲಾಗಿದೆ. 47 ವರ್ಷದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ, ಅತ್ಯಾಚಾರ ಎಸಗಲಾಗಿದೆ ಎಂದು ಸುಳ್ಳು ದೂರು ನೀಡಿರುವುದಾಗಿ ವಾದಿಸಿದರು.
ಅರುಣ್ ಪುತ್ತಿಲ ಅವರೊಂದಿಗೆ ಮಹಿಳೆ ಮಾತನಾಡಿದ ಆಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು. ಇದರ ಬಳಿಕ ಪುತ್ತಿಲ, ಬೆಂಗಳೂರಿನ ಸಿಟಿ ನ್ಯಾಯಾಲಯದಲ್ಲಿ ಮಾನಹಾನಿಯಾಗುವ ವರದಿಗಳನ್ನು ಪ್ರಸಾರಿಸದಂತೆ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದರು. ಆನಂತರ, ಮಹಿಳೆ ಠಾಣೆಗೆ ತೆರಳಿ ದೂರು ನೀಡಿದ್ದು, ಇದೊಂದು ಸುಳ್ಳು ಆರೋಪವಾಗಿದೆ. ಪುತ್ತಿಲರ ರಾಜಕೀಯ ವಿರೋಧಿಗಳು ಈ ಕೃತ್ಯದ ಹಿಂದಿದ್ದಾರೆ ಎಂದು ಪಿ.ಪಿ.ಹೆಗ್ಡೆ ನ್ಯಾಯಪೀಠದ ಗಮನ ಸೆಳೆದಿದ್ದರು.
ಈ ಕುರಿತು ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ಪುತ್ತಿಲ ಪರ ವಕೀಲರು ಕೋರಿದ್ದು ಇದನ್ನು ಮಾನ್ಯ ಮಾಡಿ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
High court holds Arun puthila sexual harassment case, lawyer argues as fake case. Puttila Parivara founder and BJP leader Arun Kumar Puthila obtained bail from a Magistrate Court in Puttur on Monday, September 2, in connection with a case of sexual harassment registered against him by the Dakshina Kannada Women Police in Puttur on Sunday, September 1.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm