ಬ್ರೇಕಿಂಗ್ ನ್ಯೂಸ್
11-09-24 06:10 pm Mangalore Correspondent ಕರಾವಳಿ
ಮಂಗಳೂರು, ಸೆ.11: ನಗರದ ಹಂಪನಕಟ್ಟೆ ಬಸ್ ನಿಲ್ದಾಣವನ್ನು ಏಕಾಏಕಿ ತೆರವುಗೊಳಿಸಿದ್ದನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಘೆರಾವ್ ಹಾಕಿದ್ದಾರೆ. ಈ ವೇಳೆ ರಸ್ತೆ ತಡೆಗೆ ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
ಹಂಪನಕಟ್ಟೆಯ ಬಸ್ಸು ತಂಗುದಾಣವನ್ನು ಏಕಾಏಕಿ ತೆರವುಗೊಳಿಸಿ ವಿದ್ಯಾರ್ಥಿ ಸಮುದಾಯಕ್ಕೆ ಆಗಿರುವ ಸಮಸ್ಯೆ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ನೀಡಲಾಗಿತ್ತು. ಆದರೂ ಸಮಸ್ಯೆ ಬಗೆಹರಿಯದ್ದನ್ನು ಖಂಡಿಸಿ ಕ್ಲಾಕ್ ಟವರ್ ಬಳಿ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.




ಹಂಪನಕಟ್ಟೆಯಲ್ಲಿ ತೆರವುಗೊಳಿಸಿದ ಪ್ರಯಾಣಿಕರ ತಂಗುದಾಣವನ್ನು ಮತ್ತೆ ನಿರ್ಮಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸ್ಥಳಕ್ಕೆ ಬಂದು ಭರವಸೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಕಳೆದ ಬಳಿಕವೂ ಸ್ಥಳಕ್ಕೆ ಯಾವ ಅಧಿಕಾರಿಗಳೂ ಬರದೇ ಇದ್ದುದನ್ನು ಕಂಡು ಸಿಟ್ಟಿಗೆದ್ದ ಪ್ರತಿಭಟನಕಾರರು ಏಕಾಏಕಿ ರಸ್ತೆಗೆ ನುಗ್ಗಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಇದಕ್ಕೆ ಅವಕಾಶ ಕಲ್ಪಿಸಲಿಲ್ಲ. ರಸ್ತೆಗಿಳಿದ ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದರು.
ಕೊನೆಗೆ, ವಿದ್ಯಾರ್ಥಿಗಳ ಆಗ್ರಹಕ್ಕೆ ಮಣಿದು ಮಂಗಳೂರು ತಹಸೀಲ್ದಾರ್ ಸ್ಥಳಕ್ಕೆ ಆಗಮಿಸಿದ್ದು ಬಸ್ ತಂಗುದಾಣ ಸಮಸ್ಯೆಯನ್ನ ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ, ತಾಲೂಕು ಸಂಚಾಲಕ ಶ್ರೇಯಸ್, ಮೋನಿಶ್, ಪ್ರತೀಕ್, ಶಶಾಂಕ್, ನಿಖಿತ್, ಸಾತ್ವಿಕ್ ಇನ್ನಿತರರು ನೇತೃತ್ವ ವಹಿಸಿದ್ದರು.
Mangalore Abvp protests over removal of bus stand near hampanakatta, police resorted to lati charge.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm