ಬ್ರೇಕಿಂಗ್ ನ್ಯೂಸ್
11-09-24 06:10 pm Mangalore Correspondent ಕರಾವಳಿ
ಮಂಗಳೂರು, ಸೆ.11: ನಗರದ ಹಂಪನಕಟ್ಟೆ ಬಸ್ ನಿಲ್ದಾಣವನ್ನು ಏಕಾಏಕಿ ತೆರವುಗೊಳಿಸಿದ್ದನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಘೆರಾವ್ ಹಾಕಿದ್ದಾರೆ. ಈ ವೇಳೆ ರಸ್ತೆ ತಡೆಗೆ ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
ಹಂಪನಕಟ್ಟೆಯ ಬಸ್ಸು ತಂಗುದಾಣವನ್ನು ಏಕಾಏಕಿ ತೆರವುಗೊಳಿಸಿ ವಿದ್ಯಾರ್ಥಿ ಸಮುದಾಯಕ್ಕೆ ಆಗಿರುವ ಸಮಸ್ಯೆ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ನೀಡಲಾಗಿತ್ತು. ಆದರೂ ಸಮಸ್ಯೆ ಬಗೆಹರಿಯದ್ದನ್ನು ಖಂಡಿಸಿ ಕ್ಲಾಕ್ ಟವರ್ ಬಳಿ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.




ಹಂಪನಕಟ್ಟೆಯಲ್ಲಿ ತೆರವುಗೊಳಿಸಿದ ಪ್ರಯಾಣಿಕರ ತಂಗುದಾಣವನ್ನು ಮತ್ತೆ ನಿರ್ಮಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸ್ಥಳಕ್ಕೆ ಬಂದು ಭರವಸೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಕಳೆದ ಬಳಿಕವೂ ಸ್ಥಳಕ್ಕೆ ಯಾವ ಅಧಿಕಾರಿಗಳೂ ಬರದೇ ಇದ್ದುದನ್ನು ಕಂಡು ಸಿಟ್ಟಿಗೆದ್ದ ಪ್ರತಿಭಟನಕಾರರು ಏಕಾಏಕಿ ರಸ್ತೆಗೆ ನುಗ್ಗಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಇದಕ್ಕೆ ಅವಕಾಶ ಕಲ್ಪಿಸಲಿಲ್ಲ. ರಸ್ತೆಗಿಳಿದ ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದರು.
ಕೊನೆಗೆ, ವಿದ್ಯಾರ್ಥಿಗಳ ಆಗ್ರಹಕ್ಕೆ ಮಣಿದು ಮಂಗಳೂರು ತಹಸೀಲ್ದಾರ್ ಸ್ಥಳಕ್ಕೆ ಆಗಮಿಸಿದ್ದು ಬಸ್ ತಂಗುದಾಣ ಸಮಸ್ಯೆಯನ್ನ ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ, ತಾಲೂಕು ಸಂಚಾಲಕ ಶ್ರೇಯಸ್, ಮೋನಿಶ್, ಪ್ರತೀಕ್, ಶಶಾಂಕ್, ನಿಖಿತ್, ಸಾತ್ವಿಕ್ ಇನ್ನಿತರರು ನೇತೃತ್ವ ವಹಿಸಿದ್ದರು.
Mangalore Abvp protests over removal of bus stand near hampanakatta, police resorted to lati charge.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm