ಬ್ರೇಕಿಂಗ್ ನ್ಯೂಸ್
12-09-24 08:24 pm Mangalore Correspondent ಕರಾವಳಿ
ಮಂಗಳೂರು, ಸೆ.12: ಮುಂದಿನ ವಾರ ಈದ್ ಮಿಲಾದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು. ಈದ್ ಮಿಲಾದ್ ಮೆರವಣಿಗೆಯನ್ನು ರಸ್ತೆಯಲ್ಲಿ ಮಾಡುವಾಗ, ಒಂದ್ವೇಳೆ ಹಿಂದುಗಳು ಅವಕಾಶ ನೀಡದಿದ್ದರೆ ಜಿಹಾದಿಗಳ ಮೆರವಣಿಗೆ ನಡೆಯುವುದಕ್ಕೆ ಸಾಧ್ಯವಿಲ್ಲ. ಕಳೆದ ಬಾರಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮೆರವಣಿಗೆ ವೇಳೆ ಗಲಭೆ ನಡೆಸಿದ್ದರು. ಈ ಬಾರಿಯೂ ರಾಜ್ಯದಲ್ಲಿ ಗಲಭೆ ಮರುಕಳಿಸುವ ಸಾಧ್ಯತೆಯಿದೆ. ಹೀಗಾಗಿ ಈ ಬಾರಿ ಈದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯ ಸರಕಾರ ಅವಕಾಶ ನೀಡಬಾರದು ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಿ ಗಲಭೆ ನಡೆಸಿರುವುದನ್ನು ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಬಾರಿ ಈದ್ ಮೆರವಣಿಗೆಯ ಮೇಲೆ ನಿರ್ಬಂಧ ಹೇರಬೇಕು, ಒಂದ್ವೇಳೆ ಮೆರವಣಿಗೆಗೆ ಅವಕಾಶ ಕೊಟ್ಟು ಹಿಂದುಗಳ ಮೇಲೆ ಹಲ್ಲೆ ಘಟನೆಗಳಾದಲ್ಲಿ ಅದಕ್ಕೆ ರಾಜ್ಯ ಸರಕಾರವೇ ಕಾರಣವಾಗುತ್ತದೆ ಎಂದು ಹೇಳಿದರು.




ನಾಗಮಂಗಲ ಗಲಭೆಯ ಹಿಂದೆ ಯಾರಿದ್ದಾರೆ, ಪಿಎಫ್ಐ ಸಂಘಟನೆಯ ಕೈವಾಡ ಇದೆಯೇ ಎನ್ನುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅಲ್ಲಿ ನೂರಾರು ಹಿಂದುಗಳ ಮೇಲೆ ಹಲ್ಲೆಯಾಗಿದೆ, ಹತ್ತಾರು ಅಂಗಡಿಗಳಿಗೆ ಬೆಂಕಿ ಕೊಟ್ಟಿದ್ದಾರೆ. ಸಾರ್ವಜನಿಕ ಆಸ್ತಿ ಮೇಲೆ ಹಾನಿ ಮಾಡಿದ್ದಾರೆ. ನಷ್ಟ ಆದವರಿಗೆ ಪರಿಹಾರ ನೀಡಬೇಕು. ಯಾರು ಮುಗ್ಧ ಅಮಾಯಕರ ಮೇಲೆ ಕೇಸು ಹಾಕಿದ್ದೀರಿ, ಅವರ ಮೇಲಿನ ಕೇಸನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ ಶರಣ್, ನಮಗೆ ರಾಜ್ಯ ಸರಕಾರ, ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ನಮ್ಮ ಧಾರ್ಮಿಕ ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡುತ್ತೇವೆ. ಪೊಲೀಸರ ಬದಲು ಕೇಂದ್ರದ ಮಿಲಿಟರಿಯ ರಕ್ಷಣೆ ನೀಡಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Don't give permission for Eid says Sharan Pumpwell, VHP in Mangalore. Says tense situations like Ragi gudda might re appear.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm